ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಬಂಧನಕ್ಕೆ ಒಳಗಾಗಿದ್ದ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಗೆ ಜಾಮೀನು ಮಂಜೂರು

ಮಂಗಳೂರು: ಬಿಲ್ಲವ ಹೆಣ್ಣು ಮಕ್ಕಳನ್ನು ಹಾಗೂ ಭಜನೆ ಸಂಕೀರ್ತನೆ ಮಾಡುವವರನ್ನು ನಿಂದಿಸಿರುವ ಆರೋಪದಡಿ ಇಂದು ಮಧ್ಯಾಹ್ನ ಬಂಧಿತರಾಗಿದ್ದ ಪುತ್ತೂರು ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರಿಗೆ ಇಂದು ಸಂಜೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ.

ಮೂರು ದಿನಗಳ ಹಿಂದೆ ಸಂಜೀವ ಪೂಜಾರಿಯವರು ಕೇರಳ ರಾಜ್ಯದ ಮಂಜೇಶ್ವರದ ವ್ಯಕ್ತಿಯೊಬ್ಬರ ಜತೆ ಆಡಿದರೆನ್ನಲಾದ ಫೋನ್ ಸಂಭಾಷಣೆಯ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಆಡಿಯೋದಲ್ಲಿ ಸಂಜೀವ ಪೂಜಾರಿ ಅವರು ಬಿಲ್ಲವ ಸಮುದಾಯದ ಮಹಿಳೆಯರನ್ನು ಹಾಗೂ ಭಜನ ಸಂಕೀರ್ತನೆಯಲ್ಲಿ ತೊಡಗಿಸಿಕೊಂಡಿರುವ ಹಿಂದೂ ಸಂಘಟನೆಯ ಕಾರ್ಯಕರ್ತರ ವಿರುದ್ದ ನಿಂದನಾತ್ಮಕವಾಗಿ ಮಾತನಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಹಿಂದು ಜಾಗರಣಾ ವೇದಿಕೆಯ ಸುಳ್ಯ ತಾಲೂಕು ಸಂಯೋಜಕ ಸಚಿನ್ ವಳಲಂಬೆ ಎಂಬವರು ಬೆಳ್ಳಾರೆ ಠಾಣೆಯಲ್ಲಿ ಈ ಕುರಿತು ದೂರು ನೀಡಿದ್ದರು. ದೂರು ಸ್ವೀಕರಿಸಿದ ಪೊಲೀಸರು ಎರಡು ದಿನದ ಬಳಿಕ ಗುರುವಾರ ಸಂಜೆ ಪ್ರಕರಣ ದಾಖಲಿಸಿದ್ದರು .

ಇಂದು ಆರೋಪಿಯನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿ ಪುತ್ತೂರು ಡಿವೈಎಸ್ಪಿ ಕಛೇರಿ ಮುಂಭಾಗ, ಹಿಂದೂ ಜಾಗರಣೆ ವೇದಿಕೆ ನೇತ್ರತ್ವದಲ್ಲಿ ಸಂಘಪರಿವಾರದ ಅಂಗ ಸಂಸ್ಥೆಗಳು ಪ್ರತಿಭಟನೆ ನಡೆಸಿತ್ತು. ಅಲ್ಲದೇ ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿ ಡಿವೈಎಸ್ಪಿ ಕಚೇರಿ ಮುಂಭಾಗ ಭಜನೆ ಹಾಡುವ ಮೂಲಕ ಪ್ರತಿಭಟನಕಾರರು ದರಣಿ ಸತ್ಯಾಗ್ರಹ ಕೂಡ ನಡೆಸಿದ್ದರು.

ಇದಾದ ಕೆಲವೇ ಗಂಟೆಗಳ ಬಳಿಕ ಕಾಣಿಯೂರಿನ ನಿವಾಸದಿಂದ ಬೆಳ್ಳಾರೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದರು. ಬಳಿಕ ಸಂಜೀವ ಪೂಜಾರಿ ಅವರನ್ನು ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಈ ವೇಳೆ ಅವರಿಗೆ ಸುಳ್ಯದ ನ್ಯಾಯಾಲಯವಉ ಜಾಮೀನು ಮಂಜೂರು ಮಡಿದೆ ಎಂದು ತಿಳಿದು ಬಂದಿದೆ.

Edited By : Vijay Kumar
PublicNext

PublicNext

19/10/2024 10:42 am

Cinque Terre

23.62 K

Cinque Terre

1

ಸಂಬಂಧಿತ ಸುದ್ದಿ