ಅರಸೀಕೆರೆ: ಲೋಕಸಭಾ ಚುನಾವಣೆ ವೇಳೆ ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ನೀತಿಸಂಹಿತೆ ಉಲ್ಲಂಘನೆಯ ಮಾತುಗಳನ್ನಾಡಿರುವ ಆಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದರ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಅರಸೀಕೆರೆ ನಗರ ಪೊಲೀಸ್ ಠಾಣೆ ಎದುರು ಜೆಡಿಎಸ್ ಕಾರ್ಯಕರ್ತರು ಧರಣಿ ನಡೆಸಿದ್ದಾರೆ.
ಕಳೆದ ಲೋಕಸಭೆ ಚುನಾವಣೆ ವೇಳೆ ವಾಮ ಮಾರ್ಗದಿಂದ ಚುನಾವಣೆ ನೀತಿಸಂಹಿತೆ ಉಲ್ಲಂಘಿಸಿ ಚುನಾವಣೆ ಗೆದ್ದಿರುವುದು ಇತ್ತೀಚೆಗೆ ವೈರಲ್ ಆಗಿರುವ ಅರಸೀಕೆರೆ ಶಾಸಕ ಕೆ.ಎಂ ಶಿವಲಿಂಗೇಗೌಡ ಅವರ ಆಡಿಯೋ ದಿಂದ ಬಹಿರಂಗವಾಗಿದೆ. ಈ ಪ್ರಕರಣವನ್ನು ಇಡಿ ಹಾಗೂ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
PublicNext
19/10/2024 11:37 am