ಉಳ್ಳಾಲ : ಇಲ್ಲಿನ ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಶುಕ್ರವಾರ ರಾತ್ರಿ ದುನಿಯಾ ವಿಜಯ್ ಭೇಟಿ ನೀಡಿದರು. ಈ ವೇಳೆ ಅವರು ಕೊರಗಜ್ಜನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಬುರ್ದುಗೋಳಿ ಕ್ಷೇತ್ರದ ಪರವಾಗಿ ದುನಿಯಾ ವಿಜಯ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಬಳಿಕ ದುನಿಯಾ ವಿಜಯ್ ಮಾತನಾಡಿ, ಕೊರಗಜ್ಜನ ಬಗ್ಗೆ ಕೇಳಿದ್ದೇನೆ. ಆದ್ದರಿಂದ ಮಂಗಳೂರು ಶೂಟಿಂಗ್ ವೇಳೆ ಕ್ಷೇತ್ರಕ್ಕೆ ಬಂದಿದ್ದಾನೆ. ಮುಂದಿನ ಪ್ರಾಜೆಕ್ಟ್ಗಾಗಿ ಪುತ್ರಿಗಾಗಿಯೇ ಒಂದು ಸಿನಿಮಾ ತೆಗೆಯುತ್ತಿದ್ದೇನೆ. "ಸಿಟಿ ಲೈಫ್" ಅನ್ನುವ ಶೀರ್ಷಿಕೆಯಡಿ ಸಿನಿಮಾವನ್ನು ತಾನೇ ನಿರ್ದೇಶಿಸಲಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು.
ಕುತ್ತಾರು ಆದಿಸ್ಥಳ ಮತ್ತು ಕಲ್ಲಾಪುವಿನ ಎರಡೂ ಕ್ಷೇತ್ರಗಳಲ್ಲಿ ವೈಬ್ರೇಷನ್ ಪವರ್ ಇದೆ. ಇದು ತಾನು ನಟಿಸುತ್ತಿರುವ 29ನೇ ಸಿನಿಮಾ. ಕಾಟೇರಾದ ಜಡೇಶ್ ಈ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಸಿನಿಮಾಕ್ಕಿನ್ನೂ ಹೆಸರನ್ನಿಟ್ಟಿಲ್ಲ. 3ದಿನಗಳ ಕಾಲ ಮಂಗಳೂರಿನ ವಾಮಂಜೂರು ಸೇರಿದಂತೆ ವಿವಿಧೆಡೆ ಶೂಟಿಂಗ್ ನಡೆಯುತ್ತಿದೆ. ಹಾಗಾಗಿ ಮಂಗಳೂರಿಗೆ ಭೇಟಿ ನೀಡಿದ್ದು, ಕೊರಗಜ್ಜನ ಬಗ್ಗೆ ದಿನಾ ಕೇಳುತ್ತಲೇ ಇದ್ದೇನೆ. ಹಾಗಾಗಿ ಭೇಟಿ ನೀಡಬೇಕೆಂಬ ಮನದಾಸೆಯಿತ್ತು. ಇಲ್ಲಿ ಬಂದು ಆಶೋತ್ತರಗಳನ್ನು ಈಡೇರಿಸುವಂತೆ ಬೇಡಿಕೊಂಡಿದ್ದೇನೆ. ತನ್ನ ಭೀಮ ಚಿತ್ರಕ್ಕೆ ಮಂಗಳೂರು ಸೇರಿದಂತೆ ರಾಜ್ಯದ ಜನತೆ ಪ್ರೀತಿ, ವಿಶ್ವಾಸ ಇಟ್ಟು ಯಶಸ್ವಿಗೊಳಿಸಿದ್ದಾರೆ. ಈ ಮೂಲಕ ಸಿನೆಮಾದ ಗೌರವ ಉಳಿಸಿದ್ದಾರೆ ಎಂದರು.
PublicNext
19/10/2024 02:05 pm