ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನಗರದ ಕೃಷ್ಣರಾಜಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ದೃಷ್ಟಿ ದಿನ ಆಚರಣೆ

ಬೆಂಗಳೂರು: 2024ರ ವಿಶ್ವ ದೃಷ್ಟಿ ದಿನವನ್ನು ಕೃಷ್ಣರಾಜಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ನೇತ್ರ ತಜ್ಞ ವೈದ್ಯಾಧಿಕಾರಿ ಡಾ. ಶಂಶೀಯ ನಾಜ್ ಅವರ ನೇತೃತ್ವದಲ್ಲಿ ಆಡಳಿತ ವೈದ್ಯಾಧಿಕಾರಿ ಡಾ. ಅಶೋಕ್ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು.

ಕೃಷ್ಣರಾಜಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆಯರು ಆರೋಗ್ಯ ನಿರೀಕ್ಷಣಾಧಿಕಾರಿಗಳು ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಸಹಕಾರದೊಂದಿಗೆ ಸುಮಾರು 65ಕ್ಕೂ ಹೆಚ್ಚು ದೃಷ್ಟಿ ದೋಷವುಳ್ಳವರನ್ನು ಕ್ಷೇತ್ರ ಮಟ್ಟದಲ್ಲಿ ಗುರುತಿಸಿ, ಪರೀಕ್ಷೆಗೆ ಕರೆತಂದದ್ದು ವಿಶೇಷವಾಗಿತ್ತು.

ಕಾರ್ಯಕ್ರಮದಲ್ಲಿ ರೆಡಿಯಾಲಜಿಸ್ಟ್ ಡಾ. ಲತಾ, ಸರ್ಕಾರಿ ನೌಕರರ ಸಂಘದ 2024ರ ಚುನಾವಣಾ ಅಧಿಕಾರಿಗಳಾದ ವೆಂಕಟೇಶಪ್ಪ, ಪ್ರಭ ಐ ಆಸ್ಪತ್ರೆಯ ನೇತ್ರ ತಜ್ಞ ವೈದ್ಯ ಡಾ. ಶೃತಿಕಾ, ಹಿರಿಯ ಔಷಧ ತಜ್ಞ ಮಾಲಿನಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀಶೈಲ ಕನ್ನಾಳ್ ಮೆಟ್ರನ್, ಪ್ರವೀಣ ಸೇರಿದಂತೆ ಕೃಷ್ಣರಾಜಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರು ಹಾಜರಿದ್ದರು.

Edited By : Vijay Kumar
Kshetra Samachara

Kshetra Samachara

19/10/2024 02:23 pm

Cinque Terre

314

Cinque Terre

0

ಸಂಬಂಧಿತ ಸುದ್ದಿ