ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ಮೈತ್ರಿ ಅಭ್ಯರ್ಥಿ ವಿಚಾರ, ವರಿಷ್ಟರಿಂದ ಅಂತಿಮ ನಿರ್ಧಾರ – ನಿಖಿಲ್ ಕುಮಾರ ಸ್ವಾಮಿ

ಹಾವೇರಿ: ರಾಮನಗರ ಜಿಲ್ಲೆ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಮೈತ್ರಿ ಅಭ್ಯರ್ಥಿಯನ್ನ ಅಂತಿಮವಾಗಿ ವರಿಷ್ಟರು ನಿರ್ಧಾರ ಮಾಡಲಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವ್ ನಲ್ಲಿ ಮಾತನಾಡಿದ ಅವರು, ಯಾರು ಸ್ಪರ್ಧಿಸಿದರೆ ಕಾಂಗ್ರೆಸ್ ಸೋಲಿಸಬಹುದು ಎಂಬ ಬಗ್ಗೆ ಈಗಾಗಲೇ ಪಕ್ಷದ ಹಿರಿಯರು ಮಾಹಿತಿ ಕಲೆ ಹಾಕಿದ್ದಾರೆ ಎಂದು ತಿಳಿಸಿದರು.

ಇಂದು ಸಂಜೆ ಬೆಂಗಳೂರಲ್ಲಿ ಮಾಜಿ ಸಿಎಂಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ಇದೆ. ನಾನೂ ಕೂಡಾ ಸಂಜೆ ಸಭೆಗೆ ಹೋಗುವೆ. ಕೋರ್ ಕಮಿಟಿ ಮಿತ್ರರು, ನಮ್ಮ ಶಾಸಕರೂ ಸಭೆಯಲ್ಲಿ ಇರ್ತಾರೆ . ಸಣ್ಣ ಪುಟ್ಟ ಗೊಂದಲ ಬಗೆಹರಿಸಲು ಸಭೆ ಏರ್ಪಾಡು ಮಾಡಲಾಗಿದೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಎಲ್ಲ ಬಗೆಹರಿಸುವ ನಿಟ್ಟಿನಲ್ಲಿ ಇಂದು ಸಭೆ ನಡೆಯಲಿದೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಕುಮಾರಣ್ಣ ಅವರ ಸ್ವಕ್ಷೇತ್ರ ಚೆನ್ನಪಟ್ಟಣ. ಆದರೆ ಅನಿರೀಕ್ಷಿತ ಬೆಳವಣಿಗೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸಿ ಈಗ ಕೇಂದ್ರ ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರ ತೆರವಾಗಿದೆ, ಪಕ್ಷ ಪ್ರಬಲವಾಗಿದೆ. ನಮ್ಮದೇ ಸಾಂಪ್ರದಾಯಿಕ ಮತಗಳಿವೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

Edited By : Vinayak Patil
PublicNext

PublicNext

19/10/2024 03:43 pm

Cinque Terre

23.2 K

Cinque Terre

0

ಸಂಬಂಧಿತ ಸುದ್ದಿ