ಉಡುಪಿ: ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿಗೆ ಮುಕ್ತಿ ಯಾವಾಗ ಎಂಬ ಪ್ರಶ್ನೆ ಉಡುಪಿ ಜನರನ್ನು ಕಾಡುತ್ತಿದೆ. ಇದೇ ವೇಳೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಇನ್ನು ಕಾಮಗಾರಿ ತಡ ಮಾಡಲ್ಲ. ಶೀಘ್ರ ಮುಗಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು, ಗುತ್ತಿಗೆದಾರರು ಮತ್ತು ರೈಲ್ವೇ ಇಲಾಖೆ ಅಧಿಕಾರಿಗಳ ಸಮನ್ವಯದ ಕೊರತೆಯಿಂದ ತಡವಾಗಿತ್ತು. ರೈಲ್ವೆಯವರು ಭದ್ರತೆ ದೃಷ್ಟಿಯಿಂದ ಇಂಚಿಂಚೂ ಗಮನಿಸುತ್ತಿದ್ದಾರೆ. ನಾನು ಕೂಡ ಮೂರು ಬಾರಿ ಸಭೆ ಮಾಡಿ ತಿಳಿಸಿದ್ದೇನೆ. ಇನ್ನು ಯಾವುದೇ ಕಾರಣಕ್ಕೂ ಕಾಮಗಾರಿ ತಡ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
PublicNext
19/10/2024 04:33 pm