ಹಾಸನ: ಅಂಗನವಾಡಿಗಳಿಗೆ ಸರಬರಾಜಾಗಬೇಕಿದ್ದ ಗೋಧಿಯನ್ನು ತಮಿಳುನಾಡಿಗೆ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಲಾರಿಯನ್ನು ಗ್ರಾಮಸ್ಥರು ತಡೆಹಿಡಿದಿದ್ದಾರೆ. ಈ ಘಟನೆ ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ಗ್ರಾಮದ ಬಳಿ ನಡೆದಿದೆ.
ಸಕಲೇಶಪುರ ತಾಲ್ಲೂಕಿನ ಎಂಎಸ್ಪಿಟಿಸಿಯಿಂದ ಗೋಧಿ ನೇರವಾಗಿ ತಮಿಳುನಾಡಿಗೆ ಕಳ್ಳ ಸಾಗಾಣಿಕೆ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಗೋದಿ ಕಳ್ಳ ಸಾಗಣಿಕೆ ಮಾಡುತ್ತಿದ್ದ ಲಾರಿಯನ್ನು ತಡೆಹಿಡಿದು ಲಾರಿ ಚಾಲಕನನ್ನು ಗ್ರಾಮಸ್ಥರು ಪ್ರಶ್ನಿಸಿದಾಗ, ಆತ ಉತ್ತರ ಕೊಡಲು ತಡ ಬಡಾಯಿಸಿದ್ದು, ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯ ಎಮ್ಎಸ್ಪಿಟಿಸಿಯಿಂದ ತಮಿಳುನಾಡಿಗೆ ಗೋಧಿ ಸಾಗಾಣಿಕೆ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ.
ನಕಲಿ ಬಿಲ್ ಸೃಷ್ಟಿಸಿ ಅಧಿಕಾರಿಗಳೇ ಈ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದು, ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
PublicNext
19/10/2024 04:38 pm