ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಮತ್ತೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ನಾಡಿನ‌ ಹಿರಿಯ ರಾಜಕೀಯ ಮುತ್ಸದ್ದಿ ಎಸ್.ಎಂ ಕೃಷ್ಣ ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇತ್ತೀಚೆಗಷ್ಟೇ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಚಾರ್ಜ್ ಆಗಿದ್ದರು. ಇದೀಗ ಮತ್ತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಬಂದಿದೆ. ಮಣಿಪಾಲ್ ಆಸ್ಪತ್ರೆ ವೈದ್ಯರಾಧ ಡಾ. ಸತ್ಯನಾರಾಯಣ ಹಾಗೂ ಡಾ.ಸುನಿಲ್ ಕಾರಂತ್ ಅವರು ತಪಾಸಣೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಅವರು ಆರೋಗ್ಯವಾಗಿದ್ದು ಸೋಮವಾರದವರೆಗೆ ಕೆಲವು ವೈದ್ಯಕೀಯ ಪರೀಕ್ಷೆಗಳ‌ ನಂತರ ಆಸ್ಪತ್ರೆ ಯಿಂದ ಬಿಡುಗಡೆ ಮಾಡಲಾಗುವುದು ಎಂದು ಮಣಿಪಾಲ್ ‌ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಹೀಗಾಗಿ ಅವರ ಹಿತೈಷಿಗಳು, ಅಭಿಮಾನಿಗಳು ಆತಂಕ‌ ಪಡುವ ಅವಶ್ಯಕತೆ ಇಲ್ಲ ಎಂದು ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಮಾಡಿಕೊಂಡಿದ್ದಾರೆ.

Edited By : Nagaraj Tulugeri
PublicNext

PublicNext

19/10/2024 04:48 pm

Cinque Terre

56.22 K

Cinque Terre

1

ಸಂಬಂಧಿತ ಸುದ್ದಿ