ಕೊಡಗು: ಮಡಿಕೇರಿ ದಸರಾ ಯಶಸ್ಸಿಗೆ ಸಹಕರಿಸಿದ ಹಾಗೂ ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಿದ ಪೌರ ಕಾರ್ಮಿಕರಿಗೆ ಆತ್ಮೀಯವಾಗಿ ಕೃತಜ್ಞತೆ ಸಲ್ಲಿಸಲಾಯಿತು.
ಮಡಿಕೇರಿ ನಗರ ದಸರಾ ಸಮಿತಿಯ ಕೆಲ ಪದಾಧಿಕಾರಿಗಳು ವೈಯಕ್ತಿಕವಾಗಿ ನಗರದ ಖಾಸಗಿ ಹೊಟೇಲ್ನಲ್ಲಿ ನಡೆಸಿದ ಸರಳ ಸಮಾರಂಭದಲ್ಲಿ ಪೌರಕಾರ್ಮಿಕರಿಗೆ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಹಾಗೂ ಮಡಿಕೇರಿ ನಗರ ದಸರಾ ಸಮಿತಿ ಅಧ್ಯಕ್ಷ ವೆಂಕಟ್ ರಾಜಾ ಅವರು, ಮಡಿಕೇರಿ ದಸರಾ ಯಶಸ್ಸಿಗೆ ಪೌರಕಾರ್ಮಿಕರ ಶ್ರಮ ಹೆಚ್ಚಿನದ್ದಾಗಿದೆ ಎಂದು ಶ್ಲಾಘಿಸಿದರು.
ಮಡಿಕೇರಿ ನಗರಕ್ಕೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಈ ಹಿನ್ನೆಲೆ ಸ್ವಚ್ಛತೆಗೆ ಹೆಚ್ಚು ಒತ್ತು ನೀಡುವುದು ಅತ್ಯಗತ್ಯ. ಆ ನಿಟ್ಟಿನಲ್ಲಿ ಪೌರಕಾರ್ಮಿಕರು ಪರಿಸರ ಶುಚಿತ್ವಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು.ಕೊಡಗು ಜಿಲ್ಲೆ ಸ್ವಚ್ಛತೆಯಲ್ಲಿ ಇಡೀ ವಿಶ್ವದಲ್ಲಿಯೇ ಮಾದರಿಯಾಗಬೇಕು ಎಂಬುದು ಪ್ರತಿಯೊಬ್ಬರ ಆಶಯವಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು.
PublicNext
19/10/2024 05:00 pm