ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶ್ರೀನಿವಾಸಪುರ: ಸ್ಮಶಾನ ಜಾಗ ಒತ್ತುವರಿ ತೆರವು

ಶ್ರೀನಿವಾಸಪುರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕಸಬಾ ಹೋಬಳಿ ಕೇತಗಾನಹಳ್ಳಿ ಗ್ರಾಮದ ಸರ್ವೇ ನಂ.79 ರಲ್ಲಿ 1 ಎಕರೆ 32 ಗುಂಟೆ ಜಮೀನನ್ನು ಸಾರ್ವಜನಿಕರ ಸ್ಮಶಾನಕ್ಕೆ ಮೀಸಲಿಡಲಾಗಿದ್ದು ಸ್ಮಶಾನದ ಜಾಗವನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದ ಕಾರಣ ಓತ್ತುವರಿಯಾಗಿದ್ದ ಸ್ಮಶಾನದ ಜಾಗವನ್ನು ತೆರವುಗೊಳಿಸಿ ಸಾರ್ವಜನಿಕರ ಸ್ಮಶಾನಕ್ಕೆ ಸದ್ಬಳಕೆಯಾಗಬೇಕು ಎಂಬ ನಿಟ್ಟಿನಲ್ಲಿ ಕೇತಗಾನಹಳ್ಳಿ ಗ್ರಾಮಸ್ಥರು ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿ ಸಾರ್ವಜನಿಕರ ಸ್ಮಶಾನದ ಜಾಗವನ್ನು ಗುರುತಿಸಿಕೊಡಬೇಕು ಎಂದು ಮನವಿ ಮಾಡಿದ ಮೇರೆಗೆ ಕಂದಾಯ ಇಲಾಖೆ ಹಾಗೂ ಸರ್ವೇ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕ ಸ್ಮಶಾನಕ್ಕೆ ಸಂಬಂದಿಸಿದ ಜಾಗ ಗುರುತಿಸಲಾಗಿದ್ದು ಹೆಬ್ಬಟ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ಅನಂತ್ ರವರು ಮುಂದೆ ನಿಂತು ಒತ್ತುವರಿ ಸ್ಮಶಾನದ ಜಾಗವನ್ನು ತೆರವುಗೊಳಿಸಿದರು ಈ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿತ್ತು ಸ್ಮಶಾನದ ಒತ್ತುವರಿ ಜಾಗವನ್ನು ತೆರವುಗೊಳಿಸಲು ಸಾರ್ವಜನಿಕರು ಸಹ ಸಹಕರಿಸಿದರು.

Edited By : PublicNext Desk
Kshetra Samachara

Kshetra Samachara

19/10/2024 07:14 pm

Cinque Terre

800

Cinque Terre

0

ಸಂಬಂಧಿತ ಸುದ್ದಿ