ಚಿಕ್ಕಮಗಳೂರು: ತಾಲೂಕಿನ ತೊಗರಿಹಂಕಲ್, ದಾಸರಹಳ್ಳಿ ಗ್ರಾಮ ಪಂಚಾಯಿತಿಯ ರಸ್ತೆ ಕಾಮಗಾರಿಗೆ ಶಾಸಕ ಹೆಚ್.ಡಿ ತಮ್ಮಯ್ಯ ಭೂಮಿ ಪೂಜೆ ನೆರವೇರಿಸಿದರು. ಈ ಗ್ರಾಮದಲ್ಲಿ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು ಪುನಹ ರಸ್ತೆಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಶಾಸಕ ಹೆಚ್ ಡಿ ತಮ್ಮಯ್ಯ ಅವರು ರಸ್ತೆ ಕಾಮಗಾರಿಗೆ ಚಾಲನೆ ನೀಡಿದ್ದಾರೆ ಬಳಿಕ ಮಾತನಾಡಿದ ಅವರು ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಬಿಡುಗಡೆಯಾದ ರಸ್ತೆ ಕಾಮಗಾರಿಗಳ ಗುದ್ದಲಿ ಪೂಜೆಯನ್ನು ಇಂದು ನೆರವೇರಿಸಿದ್ದು, ಆದಷ್ಟು ಬೇಗ ಈ ರಸ್ತೆಯನ್ನು ಮುಗಿಸುವಲ್ಲಿ ಶ್ರಮವಹಿಸುತ್ತೇವೆ, ಜೊತೆಗೆ ಉತ್ತಮ ಗುಣಮಟ್ಟದ ಕಾಮಗಾರಿ ಮಾಡುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.
Kshetra Samachara
19/10/2024 07:20 pm