ಕಾರವಾರ: ತಾಲೂಕಿನ ಮಾಜಾಳಿ ಚೆಕ್ಪೋಸ್ಟ್ನಲ್ಲಿ ಚಾಲಕನಿಗೆ ಹಲ್ಲೆ ಮಾಡಿದ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.
ನಗರದಲ್ಲಿ ಶನಿವಾರ ವರದಿಗಾರರೊಂದಿಗೆ ಮಾತನಾಡಿ, ಚಾಲಕನ ಮೇಲೆ ಹಲ್ಲೆ ಮಾಡಿದ ಅಧಿಕಾರಿಯನ್ನು ಅಮಾನತು ಮಾಡಬೇಕು. ಸಾರ್ವಜನಿಕರಿಗೆ ತೊಂದರೆ ಮಾಡುವ ಅಧಿಕಾರಿಗಳನ್ನು ಆ ಸ್ಥಳದಲ್ಲಿ ಇಡುವುದಿಲ್ಲ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.
Kshetra Samachara
19/10/2024 07:29 pm