ಹಾಸನ: ಸಿಡಿಲು ಬಡಿದು ಯುವಕ ಸಾವನ್ನಪ್ಪಿರುವ ಘಟನೆ ಹಾಸನ ತಾಲ್ಲೂಕಿನ ದುದ್ದ ಹೋಬಳಿಯ ಕುದುರುಗುಂಡಿ ಗ್ರಾಮದಲ್ಲಿ ನಡೆದಿದೆ.
22 ವರ್ಷದ ದಿನೇಶ್ ಮೃತಪಟ್ಟ ಯುವಕ. ಶನಿವಾರ ಮಧ್ಯಾಹ್ನ ಹಾಸನ ತಾಲೂಕಿನಾದ್ಯಂತ ಸುರಿದ ಭಾರಿ ಮಳೆಯಿಂದ ಮನೆಗೆ ಹೋಗಲು ಮರದ ಕೆಳಗೆ ದಿನೇಶ್ ನಿಂತಿದ್ದಾಗ ಸಿಡಿಲು ಬಡಿದಿದೆ. ಇದರಿಂದಾಗಿ ಯುವಕ ಮೃತಪಟ್ಟಿದ್ದಾನೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
PublicNext
20/10/2024 08:33 am