ಚಿಕ್ಕಮಗಳೂರು: ತಾಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ ವ್ಯಾಪ್ತಿಯಲ್ಲಿ ಧಾರಕಾರ ಮಳೆ ಸುರಿದಿದ್ದು ಕರ್ನಾಟಕದ ಅತಿ ಎತ್ತರ ಪ್ರದೇಶದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಧಾರಾಕಾರ ಮಳೆ ಸುರಿದ ಪರಿಣಾಮ ರಸ್ತೆಯಲ್ಲಿ ಎರಡು ಅಡಿ ಎತ್ತರದಲ್ಲಿ ನೀರು ಹರಿದಿದೆ. ಮಳೆರಾಯನ ಅಬ್ಬರಕ್ಕೆ ಸಿಲುಕಿದ ಪ್ರವಾಸಿಗರು ನೆಂದು ತೊಪ್ಪೆಯಾಗಿದ್ದರು. ಈ ಬಾರಿ ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಮಳೆ ಲೆಕ್ಕವೇ ಇಲ್ಲದಂತಾಗಿದ್ದು 5 ತಿಂಗಳಿನಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ.
PublicNext
20/10/2024 01:13 pm