ಚಿತ್ರದುರ್ಗ: ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಕಾರ್ಯಕ್ರಮದ ನಿಮಿತ್ತ ಆಗಮಿಸಿದ ಸಚಿವ ಡಿ. ಸುಧಾಕರ್ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು ಸಾಕಷ್ಟು ರೈತರ ಫಸಲು ಕೂಡ ಹಾಳಾಗಿವೆ. ಇದರ ಬಗ್ಗೆ ಗಮನ ಹರಿಸಿ ಸೂಕ್ತವಾಗಿ ರೈತರಿಗೆ ದೊರಕಬೇಕಾದ ಪರಿಹಾರವನ್ನು ನೀಡಲಾಗುತ್ತದೆ.
ಚಿತ್ರದುರ್ಗ ಜಿಲ್ಲೆಯಲ್ಲೂ ಸಹ ಅತಿ ಹೆಚ್ಚು ಮಳೆ ಆಗುತ್ತಿದ್ದು, ಜಿಲ್ಲೆಯಲ್ಲಿ ಶೇಂಗಾ ಬೆಳೆಯು ಸಹ ಮಳೆಗೆ ಆಹುತಿಯಾಗಿದೆ. ಜಿಲ್ಲೆಯ ಸಂಪೂರ್ಣ ವರದಿಯನ್ನು ತೆಗೆದುಕೊಂಡು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹಾರವನ್ನು ಕೊಡಿಸುವಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಡಿ. ಸುಧಾಕರ್ ತಿಳಿಸಿದ್ದಾರೆ.
PublicNext
20/10/2024 03:52 pm