ಬಂಗಾರಪೇಟೆ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯ ಕುಟುಂಬಸ್ಥರು ಆಕೆಯ ಪತಿ ಹಾಗೂ ಆತನ ಅಣ್ಣನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ನಡೆದಿದೆ.
ಬಂಗಾರಪೇಟೆ ತಾಲೂಕಿನ ಯಳೇಸಂದ್ರ ಗ್ರಾಮದ ಪತಿ ರಾಜಶೇಖರ್, ಅಣ್ಣ ನಾರಾಯಣಪ್ಪ ಹಲ್ಲೆಗೊಳಗಾದವರು. ಕುಟುಂಬದಲ್ಲಿ ಗಲಾಟೆಯಾದ ಹಿನ್ನೆಲೆಯಲ್ಲಿ ಪತ್ನಿ ನೇತ್ರಾವತಿ ಸಂಬಂಧಿಕರು ಮಚ್ಚಿನಿಂದ ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಹಲ್ಲೆಗೊಳಗಾದವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರನ್ನೂ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಬೂದಿಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.
PublicNext
20/10/2024 04:02 pm