ಚಿತ್ರದುರ್ಗ: ಗೌರಿ ಲಂಕೇಶ್ ಅವರ ಹತ್ಯೆ ಮಾಡಿದವರಿಗೆ ಹೂವಿನ ಹಾರವನ್ನು ಹಾಕಿ ಸನ್ಮಾನಿಸಿದ್ದಾರೆ, ಬಿಜೆಪಿಯವರು ಅಧಿಕಾರ ನಡೆಸುವುದಕ್ಕೆ ಹಣದ ಮೇಲೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಎಂಎಲ್ಸಿ ಬಿ ಕೆ ಹರಿಪ್ರಸಾದ್ ಬಿಜೆಪಿ ವಿರುದ್ಧ ಗುಡುಗಿದರು.
ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು ರಾಜ್ಯವನ್ನ ಸರ್ವ ಜನಾಂಗದ ಶಾಂತಿಯ ತೋಟ ಎಂದು ಬಸವಣ್ಣನವರು ಕರೆದಿದ್ದಾರೆ ಆದರೆ ಈ ರಾಜ್ಯದಲ್ಲಿ ಬಿಜೆಪಿಯವರು ಕಲಹ ಕಲಬೆಗಳನ್ನ ಮಾಡುತ್ತ ತೃಷ್ಟಿಕರಣವನ್ನು ಮಾಡುತ್ತಿದ್ದಾರೆ. ತ್ರಿವರ್ಣ ಧ್ವಜದ ಬಗ್ಗೆ ಸಾಕಷ್ಟು ಭಿನ್ನಾಭಿಪ್ರಾಯಗಳನ್ನ ಸೃಷ್ಟಿಸಿದ್ದಾರೆ ಎಂದು ತಿಳಿಸಿದರು.
ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಇವರೆಲ್ಲರೂ ತಮ್ಮ ಮಕ್ಕಳಿಗಾಗಿ ರಾಜಕೀಯ ಸ್ಥಾನಮಾನಗಳನ್ನು ಕಲ್ಪಿಸಿಕೊಟ್ಟಿದ್ದಾರೆ ಎಂದು ಬಿಜೆಪಿ ವಿರುದ್ಧ ಆರೋಪಿಸಿದರು.
PublicNext
20/10/2024 04:07 pm