ಗದಗ : ಗದಗ ನಗರದ ಕೋರ್ಟ್ ಸರ್ಕಲ್ ಹತ್ತಿರ ಇರುವ ಪೈಪ್ ಲೈನ್ ದುರಸ್ತಿ ಸಂದರ್ಭದಲ್ಲಿ ಮಣ್ಣು ಕುಸಿತ ಉಂಟಾಗಿ ನಜೀರಸಾಬ್ ನವಲಗುಂದ(44) ಎಂಬ ಕಾರ್ಮಿಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.
ಮತ್ತೊರ್ವ ಕಾರ್ಮಿಕ ಮಂಜುನಾಥ್ ಪಲ್ಲೇದ ಎಂಬಾತನು ಗಂಭೀರವಾಗಿ ಗಾಯಗೊಂಡಿದ್ದು ಗದಗನ ಜೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
24×7 ಪೈಪ್ ಲೈನ್ ದುರಸ್ಥಿ ಮಾಡುತ್ತಿರುವ ಸಮಯದಲ್ಲಿ ಕಾರ್ಮಿಕರ ಮೇಲೆ ಏಕಾಏಕಿ ಭೂಮಿ ಕುಸಿತ ಉಂಟಾಗಿದೆ. ಈ ಸಂದರ್ಭದಲ್ಲಿ ಕಾರ್ಮಿಕರು ಮಣ್ಣಿನ ಅಡಿಯಲ್ಲಿ ಸಿಲುಕಿ ಈ ದುರಂತ ಸಂಭವಿಸಿದೆ ಎಂದು ಮಾಹಿತಿ ಲಭ್ಯವಾಗಿದೆ. ಗದಗ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Kshetra Samachara
20/10/2024 05:59 pm