ಬೆಳಗಾವಿ: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಈಮೇಲ್ ಮೂಲಕ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಪೊಲೀಸರು ಸಮಗ್ರ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಡಿಸಿಪಿ ರೋಹನ್ ಜಗದೀಶ್ "ಇದೊಂದು ಹುಸಿ ಬೆದರಿಕೆಯ ಈಮೇಲ್" ಎಂದು ಮಾಹಿತಿ ನೀಡಿದ್ದಾರೆ.
ಬೆಳಗಾವಿ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಪಿ, ಅಪರಿಚಿತರು ಈಮೇಲ್ ಮೂಲಕ ಸಾಂಬ್ರಾ ವಿಮಾನ ನಿಲ್ದಾಣದ ನಿರ್ದೇಶಕ ತ್ಯಾಗರಾಜ್ ಅವರ ಈಮೇಲ್ ಖಾತೆಗೆ ಬೆದರಿಕೆ ಹಾಕಿದ್ದಾರೆ. ಬಳಿಕ ವಿಮಾನ ನಿಲ್ದಾಣಕ್ಕೆ ಭದ್ರತೆ ಹೆಚ್ಚಿಸಲಾಗಿದೆ. ಶ್ವಾನದಳ, ಬಾಂಬ್ ಸ್ಕ್ವಾಡ್ನಿಂದ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಗಿದೆ. ಇಡೀ ವಿಮಾನ ನಿಲ್ದಾಣದ ಒಳಗೆ ಮತ್ತು ಹೊರಗೆ ತಪಾಸಣೆ ಮಾಡಲಾಗಿದೆ. ಏನೂ ಸಿಕ್ಕಿಲ್ಲ. ಸುಳ್ಳು ಈಮೇಲ್ ಕಳುಹಿಸಿದ ದುಷ್ಕರ್ಮಿಗಳ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಡಿಸಿಪಿ ರೋಹನ್ ಜಗದೀಶ್ ತಿಳಿಸಿದ್ದಾರೆ.
PublicNext
20/10/2024 09:21 pm