ಸುಳ್ಯ:ಕೊಡಗು ಸಂಪಾಜೆ ಗ್ರಾಪಂ ಮಾಜೀ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಾಲಚಂದ್ರ ಕಳಗಿ ಯವರನ್ನು ವಾಹನ ಅಪಘಾತ ನಡೆಸಿ ಹತ್ಯೆ ಮಾಡಿದ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಹರಿಪ್ರಸಾದ್ ಮತ್ತು ಜಯನ್ ಎಂಬವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೊಡಗು ಜಿಲ್ಲಾ ಸೆಷನ್ಸ್ ನ್ಯಾಯಾಲಯ ಆದೇಶ ನೀಡಿದೆ.
ಬಾಲಚಂದ್ರ ಕಳಗಿಯವರನ್ನು 2019 ಮಾ.19 ರಂದು ಕಾರಿಗೆ ಲಾರಿ. 'ಢಿಕ್ಕಿಹೊಡೆದು ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಸಂಪತ್, ಹರಿಪ್ರಸಾದ್ ಮತ್ತು ಜಯನ್ ಎಂಬವರನ್ನು ಮಡಿಕೇರಿ ಪೋಲೀಸರು ಬಂಧಿಸಿದ್ದರು.
ಜಾಮೀನಿನಲ್ಲಿ ಹೊರಗೆ ಬಂದಿದ್ದ ಆರೋಪಿಗಳಲ್ಲಿ ಸಂಪತ್ ಎಂಬಾತನನ್ನು ಸುಳ್ಯದ ಶಾಂತಿನಗರದಲ್ಲಿ ಕೊಲೆ ಮಾಡಲಾಗಿತ್ತು. ಇದೀಗ ವಿಚಾರಣೆ ಮುಗಿದು ಆರೋಪಿಗಳ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗಳಾದ ಹರಿಪ್ರಸಾದ್ ಮತ್ತು
ಜಯನ್ರಿಗೆ ಜೀವಾವಧಿ ಕಾರಾಗೃಹ ವಾಸ ಹಾಗೂ ದಂಡ ವಿಧಿಸಿ ಆದೇಶ ನೀಡಲಾಗಿದೆ.
ಆರೋಪ ಸಾಬೀತಾಗಿದೆ ಎಂದು ಅ.16ರಂದು ಕೊಡಗು ನ್ಯಾಯಾಲಯ ಘೋಷಿಸಿದ್ದು, ಶಿಕ್ಷೆಯ ತೀರ್ಪನ್ನು ಅ.19ಕ್ಕೆ ಕಾಯ್ದಿರಿಸಿತ್ತು.
Kshetra Samachara
20/10/2024 10:00 pm