ಸುಳ್ಯ: ಮನೆಯೊಂದರ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ-ನಗದು ಕಳವುಗೈದ ಘಟನೆ ಸುಬ್ರಹ್ಮಣ್ಯ ಸಮೀಪದ ಬಳ್ಪ ಎಂಬಲ್ಲಿ ನಡೆದಿರುವುದು ರವಿವಾರ ಬೆಳಕಿಗೆ ಬಂದಿದೆ.
ಬಳ್ಪ ಗ್ರಾಮದ ಅಕ್ಕೇಣಿ ಸುಂದರ ಗೌಡ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಇವರು ತಮ್ಮ ಕುಟುಂಬದೊಂದಿಗೆ ಅ.17ರಂದು ಸಂಜೆ ಮನೆಗೆ ಬೀಗ ಹಾಕಿ ತಮ್ಮ ಮಗಳ ಮನೆ ಪೆರಿಂಗೇರಿಗೆ ಹೋಗಿದ್ದರು. ರವಿವಾರ ಮಧ್ಯಾಹ್ನ ಮನೆಗೆ ಹಿಂತಿರುಗಿ ಬಂದಾಗ ಮನೆಯ ಎದುರು ಬಾಗಿಲಿನ ಬೀಗ ಮುರಿದಿರುವುದು ಕಂಡು ಬಂದಿದೆ.
ಬಳಿಕ ಮನೆಯೊಳಗೆ ಪರಿಶೀಲಿಸಿದಾಗ 12 ಲಕ್ಷ ರೂ. ನಗದು ಮತ್ತು 28 ಪವನ್ ಚಿನ್ನಾಭರಣ ಕಳವಾಗಿರುವುದು ಬೆಳಕಿಗೆ ಬಂದಿದೆ
ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Kshetra Samachara
21/10/2024 11:21 am