ಶಿವಮೊಗ್ಗ : ಇನ್ನು ಇಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಹುತಾತ್ಮರ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ನಗರದ ಡಿ.ಎ.ಆರ್. ಮೈದಾನದಲ್ಲಿ ಈ ಒಂದು ದಿನಾಚರಣೆ ಆಯೋಜಿಸಲಾಗಿತ್ತು. ಈ ವೇಳೆ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ನೆರೆದಿದ್ದ ಗಣ್ಯರು ಸೇರಿದಂತೆ, ಪೊಲೀಸ್ ಅಧಿಕಾರಿಗಳು, ಪುಷ್ಪಗುಚ್ಛ ಸಮರ್ಪಣೆ ಮಾಡುವುದರ ಮೂಲಕ ಗೌರವಾರ್ಪಣೆ ಸಮರ್ಪಿಸಿದರು.
ಅಲ್ಲದೇ ಪೊಲೀಸ್ ಹುತಾತ್ಮರ ಸ್ಮರಣಾರ್ಥವಾಗಿ, 3 ಬಾರಿ ಗಾಳಿಯಲ್ಲಿ ಗುಂಡು ಹಾರಿಸುವುದರ ಮೂಲಕ ಮತ್ತು ಪೊಲೀಸ್ ಬ್ಯಾಂಡ್ ಮೂಲಕ, ಗೌರವ ಸೂಚಿಸಲಾಯಿತು. ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ ಮಂಜುನಾಥ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆಸಲಾದ ಈ ಕಾರ್ಯಕ್ರಮದಲ್ಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಜಿ.ಪಂ. ಸಿಇಓ ಹೇಮಂತ್ ಉಪಸ್ಥಿತರಿದ್ದು, ಸುಮಾರು 50 ಕ್ಕೂ ಹೆಚ್ಚು ಹುತಾತ್ಮರಾದ ಪೊಲೀಸರಿಗೆ ಗೌರವ ಸಮರ್ಪಿಸಲಾಯಿತು.
ಈ ವೇಳೆ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಉಪಸ್ಥಿತರಿದ್ದರು.
PublicNext
21/10/2024 01:27 pm