ಚಿಕ್ಕಮಗಳೂರು: ಪೊಲೀಸ್ ಹುತಾತ್ಮರ ದಿನಾಚರಣೆ ಅಂಗವಾಗಿ ಪ್ರಸ್ತುತ ವರ್ಷದಲ್ಲಿ ಹುತಾತ್ಮರಾದ ಪೊಲೀಸರಿಗೆ ನಗರದ ರಾಮನಹಳ್ಳಿಯ ಪೊಲೀಸ್ ಹುತಾತ್ಮ ಸ್ಮಾರಕದಲ್ಲಿ ಗೌರವ ಸಮರ್ಪಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾರತೀಯ ಅರಣ್ಯ ಸೇವೆಯ ಅಧಿಕಾರಿಯಾದ ಉಪೇಂದ್ರ ಪ್ರತಾಪ್ ಸಿಂಗ್, ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ವಿಕ್ರಂ ಅಮಟೆ ಹೆಚ್ಚುವರಿ ಪೊಲೀಸ್ ವರಿಷ್ಟಧಿಕಾರಿ ಕೃಷ್ಣ ಮೂರ್ತಿ ಹುತಾತ್ಮ ಸ್ಮಾರಕಕ್ಕೆ ಪುಷ್ಪ ಪುಷ್ಪಗುಚ್ಛ ಅರ್ಪಿಸಿದರು. ಈ ಸಂದರ್ಭದಲ್ಲಿ ಮೂರು ಸುತ್ತು ಗುಂಡು ಸಿಡಿಸಿ ಗೌರವ ಸಮರ್ಪಿಸಲಾಯಿತು.
Kshetra Samachara
21/10/2024 03:40 pm