ಶಿವಮೊಗ್ಗ : ನೀರಿನಲ್ಲಿ ಮುಳುಗುತ್ತಿದ್ದ ವೃದ್ಧೆಯನ್ನು ಭದ್ರಾವತಿ ಪೆÇಲೀಸರು ರಕ್ಷಣೆ ಮಾಡಿದ್ದಾರೆ. ಭದ್ರಾವತಿ ಹೊಸ ಸೇತುವೆ ಹೊಳೆ ಬಳಿ ಘಟನೆ ನಡೆದಿದೆ. 112 ಸಹಾಯವಾಣಿಗೆ ಬಂದ ದೂರಿನ ಮೇರೆಗೆ ಧಾವಿಸಿದ ಪೊಲೀಸರು ಸ್ಥಳೀಯರ ನೆರವಿನಿಂದ ರಕ್ಷಣೆ ಮಾಡಿದ್ದಾರೆ.
ಪೊಲೀಸರು ಸ್ಥಳಕ್ಕೆ ಆಗಮಿಸಿದ ವೇಳೆ ವೃದ್ಧೆಯೊಬ್ಬರು ನೀರಿನಲ್ಲಿ ಮುಳುಗುತ್ತಿರುವುದು ಕಂಡುಬಂದಿದೆ. ತಕ್ಷಣ ಸಾರ್ವಜನಿಕರ ಸಹಾಯದೊಂದಿಗೆ ವೃದ್ಧೆಯನ್ನು ರಕ್ಷಿಸಿದ್ದಾರೆ. ನೀರಿನಿಂದ ಸುರಕ್ಷಿತವಾದ ಜಾಗಕ್ಕೆ ಕರೆತಂದು ವಿಚಾರಣೆ ನಡೆಸಿದ್ದು, ಈ ವೇಳೆ ತನಗಾದ ಸಮಸ್ಯೆಯನ್ನು ತಿಳಿಸಿದ್ದಾರೆ. ಕೌಟುಂಬಿಕ ಸಮಸ್ಯೆಯಿಂದಾಗಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಗಿ ತಿಳಿಸಿದ್ದಾರೆ. ಬಳಿಕ ಪೊಲೀಸರು ವೃದ್ಧೆಯ ಮನವೊಲಿಸಿದ್ದಾರೆ.
Kshetra Samachara
21/10/2024 03:52 pm