ವಿಜಯಪುರ : ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಹುತಾತ್ಮ ಪೋಲಿಸರಿಗೆ ಪುಷ್ಪನಮನ ಸಲ್ಲಿಸಿ ಗೌರವ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ನ್ಯಾಯಾಧೀಶರಾದ ಶಿವಾಜಿ ನಲವಡೆ, ವಿಜಯಪುರ ಜಿಲ್ಲಾ ಪ್ರಭಾರ ಪೋಲೀಸ್ ವರಿಷ್ಟಾಧಿಕಾರಿ ಪ್ರಸನ್ನ ಕುಮಾರ ದೇಸಾಯಿ , ಹೆಚ್ಚುವರಿ ಪೋಲೀಸ್ ವರಿಷ್ಟಾಧಿಕಾರಿ ಶಂಕರ ಮಾರಿಹಾಳ, ಎಎಸ್ಪಿ ರಾಮನಗೌಡ ಹಟ್ಟಿ ಸೇರಿದಂತೆ ಪೋಲಿಸ್ ಸಿಬ್ಬಂದಿಗಳು, ಪೋಲಿಸ್ ಕುಟುಂಬಸ್ಥರು ಸೇರಿದಂತೆ ಸಾರ್ವಜನಿಕರು ಭಾಗವಹಿಸಿದ್ದರು.
ಇನ್ನೂ ಇದೇ ಸಂದರ್ಭದಲ್ಲಿ ವಿಜಯಪುರದ ವಿಠಲ್ ಗಡಾಧರ ತಮಿಳುನಾಡು ಚುನಾವಣೆಯಲ್ಲಿ ಪ್ರಾಣತ್ಯಾಗ ಮಾಡಿದ್ದುನ್ನ ಸ್ಮರಿಸಲಾಯಿತು.
Kshetra Samachara
21/10/2024 05:57 pm