ಕೊಡಗು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನಲೆ ಕೊಡಗು ಜಿಲ್ಲೆಯಲ್ಲೂ ಮಳೆಯ ಅಬ್ಬರ ಆರಂಭವಾಗಿದೆ. ಬೆಳಗ್ಗಿನಿಂದ ಸಂಪೂರ್ಣ ಮೋಡ ಕವಿದ ವಾತಾವರಣ ಇದ್ದು ಮಧ್ಯಾಹ್ನದ ನಂತರ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದೆ.
ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಅಕಾಲಿಕ ಮಳೆಯಿಂದ ಜಿಲ್ಲೆಯ ಜನ ಕಿರಿ ಕಿರಿ ಅನುಭವಿಸುವಂತಾಗಿದೆ. ಅಷ್ಟೇ ಅಲ್ಲದೆ ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಲ್ಲಿ ಆತಂಕ ಶುರುವಾಗಿದೆ. ಮಳೆ ಹೆಚ್ಚಾದಲ್ಲಿ ಕಾಫಿ ಕಾಯಿಗಳು ಉದುರಲಾರಂಭಿಸಿದೆ. ಈ ಬಾರಿ ಕಾಫಿಗೆ ಉತ್ತಮ ಬೆಲೆ ಏನೋ ಬಂದಿದೆ. ಆದರೆ ಮಳೆಯಿಂದಾಗಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.
PublicNext
21/10/2024 06:37 pm