ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕೋಡಿ: ಯಮಗರ್ಣಿ ಬಳಿ ಭೀಕರ ರಸ್ತೆ ಅಪಘಾತ, ಓರ್ವನಿಗೆ ಗಂಭೀರ ಗಾಯ

ಚಿಕ್ಕೋಡಿ: ಯಮಗರ್ಣಿ-ಕೊಡ್ನಿ ರಸ್ತೆಯಲ್ಲಿ ಮಧ್ಯಾಹ್ನ ಟಾಟಾಎಸ್-ದ್ವಿಚಕ್ರ ವಾಹನದ ನಡುವೆ ಸಂಭವಿಸಿದೆ. ಅಪಘಾತದಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ಚಂದ್ರಕಾಂತ ಕಾಂಬಳೆ ( 60) ಎಂದು ಗುರುತಿಸಲಾಗಿದೆ.

ಚಂದ್ರಕಾಂತ ಕಾಂಬಳೆ ಪತ್ನಿಯೊಂದಿಗೆ ಬುದಿಹಾಳದಿಂದ ನಿಪ್ಪಾಣಿಗೆ ಹೋಗುತ್ತಿದ್ದ. ಇದೇ ವೇಳೆ ಸಂಜು ಸಾಕಣ್ಣವರ ಕೊಡಣಿಯಿಂದ ಯಮಗರ್ನಿಗೆ ಟಾಟಾಎಸ್ ಕಾರನ್ನು ತೆಗೆದುಕೊಂಡು ಹೋಗುತ್ತಿದ್ದರು. ಎರಡು ವಾಹನಗಳ ನಡುವೆ ಅಪಘಾತ ಸಂಭವಿಸಿ ಚಂದ್ರಕಾಂತ ಕಾಂಬಳೆ ಅವರ ಕಾಲಿಗೆ ಗಂಭೀರ ಗಾಯವಾಗಿದೆ. ಅಪಘಾತದಲ್ಲಿ ಎರಡೂ ವಾಹನಗಳಿಗೆ ಭಾರಿ ಹಾನಿಯಾಗಿದೆ. ಘಟನೆ ಸಂಬಂಧ ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

21/10/2024 06:53 pm

Cinque Terre

4.3 K

Cinque Terre

0

ಸಂಬಂಧಿತ ಸುದ್ದಿ