ಬೈಲಹೊಂಗಲ: 28 ಮತ್ತು 29 ಡಿಸೆಂಬರ್ 2024ರಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ದೊಡ್ಡಬಳ್ಳಾಪೂರ, ಬೆಂಗಳೂರು ಇವರುಗಳ ವತಿಯಿಂದ ಸಂಸ್ಥಾಪಕ ಅಧ್ಯಕ್ಷರಾದ ಡಾ.ಹುಲಿಕಲ್ ನಟರಾಜ ಇವರ ನೇತೃತ್ವದಲ್ಲಿ ಬೆಂಗಳೂರಿನ ಬಾಗಲೂರು ವಿ.ಜೆ.ಇಂಟರನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯುವ ರಾಜ್ಯಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನದಲ್ಲಿ ರಾಜ್ಯದ ಪ್ರತಿ ಜಿಲ್ಲೆಯಿಂದ ಒಬ್ಬ ವೈಜ್ಞಾನಿಕ ಕ್ಷೇತ್ರದಲ್ಲಿ ಶ್ರಮಿಸಿದ ಸಾಧಕರಿಗೆ ರಾಜ್ಯಮಟ್ಟದ ಎಚ್.ನರಸಿಂಹಯ್ಯ ರಾಜ್ಯ ಪ್ರಶಸ್ತಿ-2024 (ಎಚ್.ಎನ್.ಪ್ರಶಸ್ತಿ) ನೀಡಿ ಗೌರವಿಸಲಾಗುವುದು.
ಬೆಳಗಾವಿ ಜಿಲ್ಲೆಯಿಂದ ವೈಜ್ಞಾನಿಕ ಕ್ಷೇತ್ರದಲ್ಲಿ ಶ್ರಮಿಸಿದ ಸಾಧಕರನ್ನು 2024ರ ಎಚ್.ಎನ್.ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರಿಗೆ ಸೂಚನೆಗಳು: ಕ.ರಾ.ವೈ.ಸಂ.ಪ.ಪದಾಧಿಕಾರಿಗಳಾಗಿಬಾರದು. 50 ವರ್ಷ ಮೇಲ್ಪಟ್ಟವರು ಇರಬೇಕು. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ವೈಜ್ಞಾನಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸರಬೇಕು. ಸ್ವ-ಅರ್ಜಿಯು ಪೂರ್ಣ ಹೆಸರು, ಭಾವಚಿತ್ರ, ಮೊಬೈಲ್ ಸಂಖ್ಯೆ, ವಿಳಾಸ, ತಮ್ಮ ಸಾಧನೆಗಳನ್ನು ಒಳಗೊಂಡಿರಬೇಕು.
ಆಸಕ್ತರು ಅರ್ಜಿಯನ್ನು ಪಿಡಿಎಫ್ ಮಾಡಿ ಮೊಬೈಲ್ 9731973793 ಸಂಖ್ಯೆಗೆ ಅ.23ರೊಳಗೆ ಕಳಿಸಬೇಕು ಎಂದು ಕ.ರಾ.ವೈ.ಸಂ.ಪ. ಬೆಳಗಾವಿ ಜಿಲ್ಲಾಧ್ಯಕ್ಷ ಸಂಗಮೇಶ ಖನ್ನಿನಾಯ್ಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
21/10/2024 08:12 pm