ಬೆಂಗಳೂರು : ಸಿಪಿ ಯೋಗೇಶ್ವರ್ ತಾವು ಕೆಪಿಸಿಸಿ ಅಧ್ಯಕ್ಷರಾಗಿದ್ದ ವೇಳೆ ಕಾಂಗ್ರೆಸ್ ನಲ್ಲಿದ್ದರು. ಉತ್ತಮ ಕೆಲಸಗಳನ್ನ ಮಾಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತಾಡಿದ ಪರಂ, ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಅಧ್ಯಕ್ಷರು ಹಾಗೂ ಹೈ ಕಮಾಂಡ್ ನಿರ್ಧಾರ ಮಾಡಲಿದೆ ಎಂದರು. 3 ಕ್ಷೇತ್ರದ ಬೈ ಎಲೆಕ್ಷನ್ ನಲ್ಲಿ ಗೆಲ್ಲುವ ವಿಶ್ವಾಸ ಇದೆ.
ಕಾಂಗ್ರೆಸ್ ಎಲ್ಲಾ ರೀತಿಯ ರಣನೀತಿಗಳನ್ನ ಹೆಣೆಯುತ್ತಿದೆ. ಯೋಗೇಶ್ವರ್ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ನಿಂದ ಎಲೆಕ್ಷನ್ ನಿಲ್ಲುವ ನಿರ್ಧಾರ ಮಾಡಿದರೆ ನೋಡೋಣ ಎಂದು ಪರಂ ಹೇಳಿದರು. ಬಹುತೇಕ 2 ದಿನದೊಳಗೆ ಅಭ್ಯರ್ಥಿ ಆಯ್ಕೆ ಬಗ್ಗೆ ಅಂತಿಮ ತೀರ್ಮಾನ ಹೊರಬೀಳುತ್ತೆ ಎಂದು ತಿಳಿಸಿದರು.
ಸದ್ಯ ಚನ್ನಪಟ್ಟಣ ಕ್ಷೇತ್ರವನ್ನ ಕಾಂಗ್ರೆಸ್ ಹಾಗೂ ಮೈತ್ರಿ ಪಕ್ಷಗಳು ಪ್ರತಿಷ್ಠೆಯಾಗಿ ಸ್ವೀಕರಿಸಿವೆ. ಎರಡೂ ಕಡೆಯಿಂದ ಶತಾಯಗತಾಯ ಗೆಲ್ಲಬೇಕು ಎಂಬ ರಣತಂತ್ರ ಹೆಣೆಯಲಾಗುತ್ತಿದೆ.
PublicNext
22/10/2024 01:50 pm