ಚನ್ನಪಟ್ಟಣ : ಉಪಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ. ಯಾವ ಪಕ್ಷದಿಂದ ಕಣಕ್ಕಿಳಿಯಬೇಕು ಎಂಬುದನ್ನು ಮಂಗಳವಾರ ಸಂಜೆಯೊಳಗೆ ಘೋಷಿಸುತ್ತೇನೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ಪಟ್ಟಣದ ಕುವೆಂಪುನಗರದಲ್ಲಿರುವ ತಮ್ಮ ನಿವಾಸದಲ್ಲಿ ಬೆಂಬಲಿಗರ ಸಭೆಗೂ ಮುಂಚೆ, ಮನೆ ಮುಂದೆ ನೆರೆದಿದ್ದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಗುರುವಾರ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದೇನೆ. ಬಿಜೆಪಿ ಟಿಕೆಟ್ ಸಿಗುವ ಸಾಧ್ಯತೆ ಇರುವುದರಿಂದ ಸಂಜೆವರೆಗೆ ಕಾಯುವೆ. ಒಂದು ವೇಳೆ ಸಿಗದಿದ್ದರೆ ನಿಮ್ಮ ಅಭಿಪ್ರಾಯ ಆಧರಿಸಿ ಸ್ವತಂತ್ರವಾಗಿ ಅಥವಾ ಬೇರೆ ಪಕ್ಷದಿಂದ ಕಣಕ್ಕಿಳಿಯಬೇಕೊ ಎಂಬುದನ್ನು ನಿರ್ಧರಿಸುತ್ತೇನೆ ಎಂದರು.
Kshetra Samachara
22/10/2024 02:09 pm