ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಸ್ ಸೌಲಭ್ಯ ಒದಗಿಸಿ

ಚಿಕ್ಕಮಗಳೂರು: ತಾಲೂಕಿನ ಎಸ್.ಬಿದರೆ ಗ್ರಾಮದ ಸುತ್ತಮುತ್ತಲಿನ ವಿದ್ಯಾರ್ಥಿ ಗಳಿಗೆ ಹಾಗೂ ಸಾರ್ವಜನಿಕರಿಗೆ ಸರಿಯಾದ ಬಸ್ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿ ಕರವೇ (ಪ್ರವೀಣ್‌ ಶೆಟ್ಟಿ ಬಣ) ಮುಖಂಡರುಗಳು ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.ಶಿವಪುರ ಎಸ್.ಬಿದರೆ, ಧರ್ಮ ಪುರ, ಲಿಂಗದಹಳ್ಳಿ ಗ್ರಾಮಗಳ ಅನೇಕ ಮಕ್ಕಳು ವಿದ್ಯಾಭ್ಯಾಸಕ್ಕೆ ಜಾವಗಲ್‌ಗೆ ತೆರಳಬೇಕಿದೆ. ಹಿಂತಿರುಗಿ ವಾಪಸ್ ತೆರಳಲು ಬಸ್ ಸೌಕರ್ಯವಿಲ್ಲದೇ ಬಹಳಷ್ಟು ಪರದಾಡುವಂತಾಗಿದೆ.

ವಿವಿಧ ಗ್ರಾಮಗಳಿಂದ ಜಾವಗಲ್‌ಗೆ ಸುಮಾರು 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೆರಳುತ್ತಿದ್ದಾರೆ. ಬೆಳಿಗ್ಗೆ ಸಮಯಕ್ಕೆ ಬಸ್ಸಿದೆ. ಆದರೆ ಶಾಲಾವಧಿಯ ಮುಗಿದ ಬಳಿಕ ಸಂಜೆ 4 ಗಂಟೆಗೆ ವಾಪಸ್ ತೆರಳಲು ಯಾವುದೇ ಸರ್ಕಾರಿ ಬಸ್‌ಗಳಿಲ್ಲ. ವಿದ್ಯಾರ್ಥಿಗಳು ತಮ್ಮ ಗ್ರಾಮಕ್ಕೆ ನಡೆದುಕೊಂಡೇ ತೆರಳುವ ಸ್ಥಿತಿಯಿದೆ. ಹೀಗಾಗಿ ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

22/10/2024 02:53 pm

Cinque Terre

860

Cinque Terre

0

ಸಂಬಂಧಿತ ಸುದ್ದಿ