ಬೆಂಗಳೂರು: ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ಅಣ್ಣ - ತಂಗಿ ಕೆರೆಯಲ್ಲಿ ಮುಳುಗಿದ ಘಟನೆಯ ಕುರಿತು ಪ್ರತಿಕ್ರಿಯಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ''ಇದೊಂದು ದುರಂತದ ಘಟನೆಯಾಗಿದ್ದು, 13 ಹಾಗೂ 11 ವರ್ಷದ ಮಕ್ಕಳಿಬ್ಬರು ಕೆರೆಯಲ್ಲಿ ಮುಳುಗಿದ್ದಾರೆ. ನೀರು ತರಲು ಹೋದಾಗ ಮೊದಲು ತಂಗಿ ಹಾಗೂ ನಂತರ ಅಣ್ಣ ಕೆರೆಯಲ್ಲಿ ಮುಳುಗಿದ್ದಾರೆ. ಬಾಲಕನ ಮೃತದೇಹ ಪತ್ತೆಯಾಗಿದೆ. ಪೊಲೀಸರು ಹಾಗೂ ಅಗ್ನಿಶಾಮಕದಳದ ಅಧಿಕಾರಿಗಳು ಕಾರ್ಯಾಚರಣೆ ಮುಂದುವರೆಸಿದ್ದಾರೆ'' ಎಂದು ಹೇಳಿದ್ದಾರೆ.
PublicNext
22/10/2024 03:36 pm