ಚಿಕ್ಕಮಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣ ಆರೋಪಿಗಳನ್ನು ಸನ್ಮಾನಿಸಿರುವವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಂಡು, ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಎದ್ದೇಳು ಕರ್ನಾಟಕ ಸಮಿತಿಯ ಕಾರ್ಯಕರ್ತರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಅತ್ಯಾಚಾರಿಗಳಿಗೆ, ಕೊಲೆಪಾತರಿಗೆ ಸನ್ಮಾನ ಮಾಡುವುದನ್ನು ಗುಜರಾತ್, ಉತ್ತರ ಪ್ರದೇಶಗಳಲ್ಲಿ ಕಂಡಿದ್ದು, ಈ ಸ್ಥಿತಿಗೆ ರಾಜ್ಯವು ತಲುಪಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿ ಆರೋಪಿಗಳನ್ನು ಸನ್ಮಾನಿಸಿರುವುದು ಹೀನ ಕೃತ್ಯ ಎಂದು ಎದ್ದೇಳು ಕರ್ನಾಟಕ ಸಮಿತಿ ಖಂಡಿಸಿದೆ.
Kshetra Samachara
22/10/2024 05:51 pm