ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ ಕೇಸ್ ವಾಪಸ್ ವಿಚಾರ - ಕೇಂದ್ರ ಕಾನೂನು ಸಚಿವರಿಗೆ ದೂರು ನೀಡಿದ ಛಲವಾದಿ ನಾರಾಯಣಸ್ವಾಮಿ

ನವದೆಹಲಿ : ಇತ್ತಿಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಹುಬ್ಬಳ್ಳಿ ಪ್ರಕರಣವನ್ನ ರಾಜ್ಯ ಸರ್ಕಾರ ಕೈ ಬಿಟ್ಟಿತ್ತು. ಈ ಹಿನ್ನೆಲೆ ರಾಜ್ಯ ಸರ್ಕಾರದ ಈ ನಿರ್ಧಾರದ ವಿರುದ್ಧ ಕೇಂದ್ರದ ಕಾನೂನು ಸಂಸದೀಯ ವ್ಯವಹಾರಗಳ ರಾಜ್ಯ ಖಾತೆಯ ಸಚಿವ ಅರ್ಜುನ್ ರಾಮ್ ಮೇಘವಾಲ್‌ರಿಗೆ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ದೂರು ನೀಡಿದ್ದಾರೆ.

ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ರನ್ನ ಅವರ ದೆಹಲಿಯ ಕಚೇರಿಯಲ್ಲಿ ಭೇಟಿ ಮಾಡಿ ರಾಜ್ಯ ಸರ್ಕಾರ ಒಂದು ಸಮುದಾಯವನ್ನ ಒಲೈಕೆ ಮಾಡಲು ಹುಬ್ಬಳ್ಳಿ ಠಾಣೆ ಮೇಲೆ ದಾಳಿ ಮಾಡಿದವರ ಮೇಲಿನ ಕೇಸ್ ವಾಪಸ್ ಪಡೆದಿದ್ದಾರೆ.

ಇದು ಸಂವಿಧಾನದ ಬಾಹಿರ ಪ್ರತಿಯೊಂದು ವಿಷಯದಲ್ಲೂ ಕಾನೂನುಬಾಹಿರ ನಿರ್ಧಾರ ತೆಗೆದುಕೊಳ್ಳುತ್ತಿರುವ ಸರ್ಕಾರದ ಕ್ರಮ ಖಂಡನೀಯ. ಆದ್ದರಿಂದ ಸಂವಿಧಾನ ವಿರೋಧಿ ರಾಜ್ಯ ಸರ್ಕಾರದ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಛಲವಾದಿ ನಾರಾಯಣ ಸ್ವಾಮಿ ಮನವಿ ಸಲ್ಲಿಸಿದ್ದಾರೆ.

Edited By : Abhishek Kamoji
PublicNext

PublicNext

22/10/2024 06:46 pm

Cinque Terre

21.9 K

Cinque Terre

9

ಸಂಬಂಧಿತ ಸುದ್ದಿ