ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸಿ.ಪಿ.ಯೋಗೇಶ್ವರ ಕಾಂಗ್ರೆಸ್‌ಗೆ ಬಂದರೆ ಸ್ವಾಗತ - ಸಚಿವ ಲಾಡ್

ಧಾರವಾಡ: ಮಾಜಿ ಸಚಿವರಾಗಿರುವ ಸಿ.ಪಿ.ಯೋಗೇಶ್ವರ ಅವರು ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.

ಧಾರವಾಡದಲ್ಲಿ ಮಾತನಾಡಿದ ಅವರು, ಸಿ.ಪಿ.ಯೋಗೇಶ್ವರ ಅವರಿಗೆ ನಮ್ಮ ಪಕ್ಷಕ್ಕೆ ನಾನು ವೈಯಕ್ತಿಕವಾಗಿ ಸ್ವಾಗತ ಮಾಡುತ್ತೇನೆ. ನಮ್ಮ ಪಕ್ಷದ ಹೈಕಮಾಂಡ್ ಇದೆ. ಅಧ್ಯಕ್ಷರು ಹಾಗೂ ಸಿಎಂ ಇದ್ದಾರೆ ಅವರ ಒಪ್ಪಿಗೆ ಮೇರೆಗೆ ಸಿ.ಪಿ.ಯೋಗೇಶ್ವರ ಅವರು ನಮ್ಮ ಪಕ್ಷಕ್ಕೆ ಬಂದರೆ ದೊಡ್ಡ ಪ್ರಮಾಣದಲ್ಲಿ ನಾನು ಅವರಿಗೆ ವೆಲ್ ಕಮ್ ಮಾಡುತ್ತೇನೆ ಎಂದರು.

ಸಂಡೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಮಾತನಾಡಿದ ಲಾಡ್, ಈ ಟಿಕೆಟ್ ವಿಚಾರ ಸದ್ಯಕ್ಕೆ ಬಗೆಹರಿದಿದೆ. ಆದರೆ, ಯಾರಿಗೆ ಫೈನಲ್ ಆಗುತ್ತದೆ ಎಂಬುದನ್ನು ನೋಡಬೇಕು. ಸಂಸದ ತುಕಾರಾಂ ಅವರ ಪತ್ನಿಯ ಹೆಸರು ಇದೆ. ಆದರೆ, ಇನ್ನೂ ಅಧಿಕೃತವಾಗಿ ಹೊರಗೆ ಬಂದಿಲ್ಲ. ನಮ್ಮ ತೀರ್ಮಾನವನ್ನು ನಾವು ಹೇಳಿದ್ದೇವೆ. ಪಕ್ಷ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ನೋಡಬೇಕು ಎಂದರು.

ಶಿಗ್ಗಾಂವಿ ಉಪಚುನಾವಣೆಯಲ್ಲೂ ಕೈ ಟಿಕೆಟ್ ವಿಚಾರವಾಗಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಲಿಂಗಾಯತ ಹಾಗೂ ಮುಸ್ಲಿಂ ಅಂತಾ ಏನೂ ಇಲ್ಲ. ನಮ್ಮದು ಸೆಕ್ಯುಲರ್ ಪಕ್ಷ. ನಾವೆಲ್ಲರನ್ನೂ ಒಂದೇ ರೀತಿ ನೋಡುತ್ತೇವೆ. ಯಾರಿಗೇ ಟಿಕೆಟ್ ಕೊಟ್ಟರೂ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ. ನಮ್ಮ ಅನಿಸಿಕೆಗಳನ್ನು ಬಹಿರಂಗವಾಗಿ ಹೇಳಲು ಬರುವುದಿಲ್ಲ. ಎಲ್ಲ ವಿಚಾರಗಳನ್ನೂ ಪಕ್ಷದಲ್ಲಿ ಹೇಳಿಕೊಂಡಿರುತ್ತೇವೆ ಎಂದರು.

Edited By : Vinayak Patil
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

22/10/2024 07:03 pm

Cinque Terre

42.04 K

Cinque Terre

2

ಸಂಬಂಧಿತ ಸುದ್ದಿ