ಶ್ರೀನಿವಾಸಪುರ : ಅರಣ್ಯ ಇಲಾಖೆ ರೈತರ ಬೆಳೆಗಳನ್ನು ನಾಶ ಪಡಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಭೂ ಸಂತ್ರಸ್ಥರಿಂದ ಪ್ರತಿಭಟನೆ ಮಾಡಿ ಅರಣ್ಯ ಇಲಾಖೆ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಇದೇ ಸಂದರ್ಭದಲ್ಲಿ ಕೆಪಿಆರ್ಎಸ್ ನ ಪ್ರಧಾನ ಕಾರ್ಯದರ್ಶಿ ಪಾತಕೋಟೆ ಪಿ.ಆರ್.ನವೀನ್ಕುಮಾರ್ ಮಾತನಾಡಿ, 2023 ರಲ್ಲಿ ಅರಣ್ಯ ಇಲಾಖೆಯು ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ರೈತರ ಆಸ್ತಿ, ಪಾಸ್ತಿ ಬೆಳಗಳನ್ನು ನಾಶಪಡಿಸಿ, ರೈತರ ಭೂಮಿಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದುಕೊಂಡಿದೆ ಎಂದು ಆರೋಪಿಸಿದರು.
Kshetra Samachara
22/10/2024 07:47 pm