ಮುಳಬಾಗಿಲು ತಾಯಲೂರು ಗ್ರಾಮದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಪ್ರಾರಂಭಿಸಲು ಈಗಾಗಲೇ ಸರ್ಕಾರಕ್ಕೆ ಪ್ರಸ್ಥಾವನೆಯನ್ನು ಸಲ್ಲಿಸಲಾಗಿದೆ ಎಂದು ಶಾಸಕ ಸಮೃದ್ದಿ ತಿಳಿಸಿದರು.
ನಗರದ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಮಂಜೂರಾಗಿರುವ ಅಂಬ್ಯುಲೆನ್ಸ್ನ್ನು ಉದ್ಘಾಟಿಸಿ ಅವರು ಮಾತನಾಡಿದರು,
ನಂಗಲಿ ಹಾಗೂ ನಗರದ ಸರಕಾರಿ ಆಸ್ಪತ್ರೆಗೆ ಹೈಟೆಕ್ ಆಂಬ್ಯುಲೆನ್ಸ್ ಮಂಜೂರಾಗಿದೆ. ನಂಗಲಿ ಹಾಗೂ ನಗರದ ಹೊರವಲಯದಲ್ಲಿ ತಾಯಿ ಹಾಗೂ ಮಕ್ಕಳ ಆಸ್ಪತ್ರೆಯನ್ನು ತಲಾ 26 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಕೆಲವೇ ದಿನಗಳಲ್ಲಿ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ತಿಳಿಸಿದರು.
ನಗರದ ಸರಕಾರಿ ಆಸ್ಪತ್ರೆಯಲ್ಲಿ ಶವಗಳನ್ನು ಸಾಗಾಣಿಕೆ ಮಾಡಲು ವೈಯುಕ್ತಿಕವಾಗಿ ಆಂಬ್ಯುಲೆನ್ಸ್ ನೀಡಲಾಗುವುದು. ತಾಲೂಕಿನ 6 ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹೊಸ ಅಂಬ್ಯುಲೆನ್ಸ್ ಮಂಜೂರು ಮಾಡುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
Kshetra Samachara
22/10/2024 08:01 pm