ಹಿರಿಯೂರು : ಇದೇ ಅಕ್ಟೋಬರ್ 24ರಂದು ನಡೆಯಬೇಕಿದ್ದ ರಾಜ್ಯ ಸರ್ಕಾರದ ಸಂಪುಟ ಸಭೆಯು ಅಕ್ಟೋಬರ್ 28ಕ್ಕೆ ಮುಂದೂಡಿಕೆ ಆಗಿದ್ದು, ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಳಮೀಸಲಾತಿ ಜಾರಿ ವಿಚಾರವಾಗಿ ಚರ್ಚೆ ಮಾಡುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರು ಅಂದಿನ ಸಭೆಯಲ್ಲಿ ಒಳಮೀಸಲಾತಿ ಜಾರಿ ಬಗ್ಗೆ ಧ್ವನಿ ಎತ್ತುವಂತೆ ಮನವಿ ಮಾಡಬೇಕು ಎಂದು ಜೀವೇಶ್ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರು ರಾಜ್ಯ ಸರ್ಕಾರದ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿ ಬಗ್ಗೆ ಧ್ವನಿ ಎತ್ತುವ ವಿಚಾರವಾಗಿ ತಾಲ್ಲೂಕಿನ ಒಳಮೀಸಲಾತಿ ಹೋರಾಟಗಾರರು ಅಕ್ಟೋಬರ್ 26ರ ಶನಿವಾರ ಬೆಳಿಗ್ಗೆ 11ಗಂಟೆಗೆ ನಗರದ ಡಾ:ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಯಿಂದ ಜಿಲ್ಲಾ ಉಸ್ತುವಾರಿ ಡಿ.ಸುಧಾಕರ್ ರವರ ಕಛೇರಿಯವರೆಗೂ ಪ್ರತಿಭಟನಾ ರ್ಯಾಲಿ ಮುಖಾಂತರ ತೆರಳಿ ಸಚಿವರಿಗೆ ಮನವಿ ಸಲ್ಲಿಸಬೇಕು ಎಂದರು.
ತಾಲ್ಲೂಕಿನ ಎಲ್ಲಾ ಹೋರಾಟಗಾರರು/ಸಮುದಾಯದ ಮುಖಂಡರುಗಳು ತಪ್ಪದೇ ಈ ಹೋರಾಟಕ್ಕೆ ಆಗಮಿಸುವ ಮೂಲಕ ಹೋರಾಟಕ್ಕೆ ನಮ್ಮೊಂದಿಗೆ ಕೈಜೋಡಿಸುವ ಮೂಲಕ ನಮ್ಮ ಹೋರಾಟವನ್ನು ಸಫಲಗೊಳಿಸಬೇಕಿದೆ. ಈ ಸಭೆಯಲ್ಲಿ ಮನವಿ ಮಾಡಿದರು.
Kshetra Samachara
22/10/2024 08:05 pm