ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: 'ಸಿ.ಪಿ ಯೋಗೇಶ್ವರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ನನಗೇನೂ ಗೊತ್ತಿಲ್ಲ' - ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಸಿಪಿವೈ ರಾಜೀನಾಮೆ ಕೊಟ್ಟಿದ್ದು, ಕಾಂಗ್ರೆಸ್ ಸೇರ್ಪಡೆ ಬಗ್ಗೆ ನನಗೇನೂ ಗೊತ್ತಿಲ್ಲ. ಪಕ್ಷದ ಹಂತದಲ್ಲಿ ‌ಮಾತುಕತೆ ನಡೆದಿರುವ ಬಗ್ಗೆಯೂ ಮಾಹಿತಿ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.‌

ಪರಿಷತ್ ಸ್ಥಾನಕ್ಕೆ ಸಿ.ಪಿ ಯೋಗೇಶ್ವರ ರಾಜೀನಾಮೆ ವಿಚಾರವಾಗಿ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಏನೆಲ್ಲ ಬೆಳವಣಿಗೆ ಆಗ್ತಿವೆ ಎಂಬುದನ್ನು ಕಾದು ನೋಡಬೇಕಿದೆ. ಉಪ ಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳಲ್ಲಿ ನಮಗೆ ಗೆಲ್ಲುವ ಅವಕಾಶಗಳಿವೆ. ಶಿಗ್ಗಾಂವಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತಗಳು ಜಾಸ್ತಿ ಇವೆ. ಅಲ್ಪಸಂಖ್ಯಾತ ಸಮುದಾಯದ ಡಿಮ್ಯಾಂಡ್ ಪರಿಶೀಲಿಸಲಾಗುವುದು ಎಂದರು.

Edited By : Suman K
PublicNext

PublicNext

22/10/2024 08:18 pm

Cinque Terre

5.98 K

Cinque Terre

0

ಸಂಬಂಧಿತ ಸುದ್ದಿ