ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನೆಲದವರೆಗೂ ಬಗ್ಗಿದ್ದೇನೆ, ಇನ್ನೂ ಬಗ್ಗಲು ನನ್ನಿಂದ ಸಾಧ್ಯವಿಲ್ಲ - HDK

ಬೆಂಗಳೂರು : ಚನ್ನಪಟ್ಟಣ ಟಿಕೆಟ್ ವಿಷಯಕ್ಕೆ ನೆಲದವರೆಗೂ ಬಗ್ಗಿದ್ದೇನೆ. ಇನ್ನೂ ಬಗ್ಗಿ ಎಂದರೆ ಎಲ್ಲಿಗೆ ಬಗ್ಗಲಿ. ನನ್ನ ತಾಳ್ಮೆ, ಸಹನೆಗೂ ಮಿತಿ ಇದೆ. ಅಭ್ಯರ್ಥಿ ವಿಷಯದಲ್ಲಿ ಕಾರ್ಯಕರ್ತರ ಭಾವನೆಗಳಿಗೆ ವಿರುದ್ಧವಾಗಿ ನಿರ್ಧಾರ ಕೈಗೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವರು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಕಾರ್ಯಕರ್ತರು ಮುಖಂಡರ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಈ ರಾಜ್ಯದಲ್ಲಿ ನನ್ನಷ್ಟು ಉಪ ಚುನಾವಣೆಗಳನ್ನು ಎದುರಿಸಿದ, ಯಶಸ್ವಿಯಾಗಿ ನಿಭಾಯಿಸಿದ ವ್ಯಕ್ತಿ ಇನ್ನೊಬ್ಬರಿಲ್ಲ, ಎಂತೆಂತಹ ಚುನಾವಣೆಗಳನ್ನು, ಅಗ್ನಿಪರೀಕ್ಷೆಗಳನ್ನು ಎದುರಿಸಿದ್ದೇನೆ. ಚನ್ನಪಟ್ಟಣ ಚುನಾವಣೆ ಎದುರಿಸುವುದಕ್ಕೆ ನನಗೆ ಭಯವೇ..? ಸಾಧ್ಯವೇ ಇಲ್ಲ.

ನಿಮ್ಮಂತ ಕಾರ್ಯಕರ್ತರು ಜೊತೆಯಲ್ಲಿ ಇರಬೇಕಾದರೆ ನಾವು ಹೆದುರುತ್ತೇವೆಯೇ? ನೆಲದವರಿಗೆ ಬಗ್ಗಿದ್ದೇನೆ, ಜೆಡಿಎಸ್ ಮುಗಿಸಲು ಅನೇಕರು ನಮ್ಮಿಂದಲೇ ಬೆಳೆದವರು ಎಂತೆತ ಮಾತಾಡಿದ್ದಾರೆ. ನಾನು ಬಗ್ಗಿರುವುದು ಅಧಿಕಾರಕ್ಕಾಗಿ ಅಲ್ಲಾ. ವೈಯಕ್ತಿಕವಾಗಿ ನಾನು ಮಾಡದಿರುವ ತಪ್ಪಿಗೆ ತಲೆಕೊಟ್ಟಿದ್ದೇನೆ. ಈ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಮೂಲೋತ್ಪಾಟನೆ ಮಾಡಬೇಕು ಎನ್ನುವ ಪ್ರಧಾನಿ ಮೋದಿ ಸಂಕಲ್ಪಕ್ಕೆ ಹೆಗಲಾಗಿ ನಿಂತಿದ್ದೇನೆ ಎಂದು ಅವರು ಹೇಳಿದರು.

ಎನ್ ಡಿಎ ಮೈತ್ರಿ ಭದ್ರವಾಗಿದೆ. ಪ್ರಧಾನಿ ಮೋದಿ ಅವರು ದೇವೇಗೌಡರಿಗೆ ಕೊಡುವ ಗೌರವವನ್ನು ಯಾರಿಗೂ ಕೊಡಲ್ಲ. ಅವರಿಬ್ಬರ ನಡುವಿನ ಗೌರವಭಾವ ಎಂತದ್ದು ಎನ್ನುವುದನ್ನು ನಾನು ನೋಡಿದ್ದೇನೆ. ಆ ಸಂಬಂಧಕ್ಕೆ ಚ್ಯುತಿ ಬರಬಾರದು. ಅದಕ್ಕಾಗಿ ಬಗ್ಗಿದ್ದೇನೆ, ಇನ್ನೂ ಬಗ್ಗಿ ಎಂದರೆ ನನ್ನಿಂದ ಸಾಧ್ಯವಿಲ್ಲ ಎಂದು ಭಾಷಣ ಮಾಡಿದರು.

Edited By : Vinayak Patil
PublicNext

PublicNext

22/10/2024 09:07 pm

Cinque Terre

9.54 K

Cinque Terre

5

ಸಂಬಂಧಿತ ಸುದ್ದಿ