ಬೆಂಗಳೂರು : ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆಯ ಚಾಲನೆಯ ನಂತರದ ಎಲೆಕ್ಟ್ರಿಕಲ್ ಸಂಬಂಧಿತ ಕೆ.ಪಿ.ಟಿ.ಸಿ.ಎಲ್ ಕಾಮಗಾರಿಗಳನ್ನು ಕೈಗೊಳ್ಳಲು ತಾತಗುಣಿ ಮತ್ತು ಹಾರೋಹಳ್ಳಿಯಲ್ಲಿರುವ 220 ಕೆ.ವಿ. ವಿದ್ಯುತ್ ಉಪ ಕೇಂದ್ರಗಳನ್ನು ಅ.23ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 03ರವರೆಗೆ ಅಂದರೆ ಒಟ್ಟು 06 ಗಂಟೆಗಳ ಕಾಲ ಎಲ್ಲಾ ಹಂತಗಳನ್ನು ಸ್ಥಗಿತಗೊಳಿಸುತ್ತಿರುವ ಹಿನ್ನಲೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಲು ಹಾಗೂ ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ಪ್ರಸಾತ್ ಮನೋಹರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
22/10/2024 10:15 pm