ಹಾವೇರಿ : ಶಿಗ್ಗಾಂವ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿ ಆಯ್ಕೆ ಅಳಿದು ತೂಗುತ್ತಿದೆ. ಈ ಮಧ್ಯೆ ಶಿಗ್ಗಾಂವ್ ಕಾಂಗ್ರೆಸ್ ಟಿಕೆಟ್ ಮುಂಚೂಣಿಯಲ್ಲಿ ಶಾಸಕ ವಿನಯ ಕುಲಕರ್ಣಿ ಪುತ್ರಿ ಹೆಸರು ಮುನ್ನೆಲೆಗೆ ಬಂದಿದೆ ಎನ್ನಲಾಗುತ್ತಿದೆ.
ವೈಶಾಲಿ ಕುಲಕರ್ಣಿ ಹೆಸರು ಮುನ್ನಲೆಗೆ ಬರುತ್ತಿದ್ದಂತೆ ಸ್ಥಳೀಯರು ಟಿಕೆಟ್ ಆಕಾಂಕ್ಷಿಗಳು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಬಳಿ ಭೇಟಿಗೆ ಧಾವಿಸಿದ್ದಾರೆ.
ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ ಮಾಡಿ ಸ್ಥಳೀಯರಿಗೆ ಟಿಕೆಟ್ ಕೊಡಲು ಒತ್ತಾಯ ಮಾಡಲು ಮುಂದಾಗಿದ್ದಾರೆ. ಜಿಲ್ಲಾಧ್ಯಕ್ಷ ಸಂಜೀವ ಕುಮಾರ ನೀರಲಗಿ, ಯಾಸೀರ ಖಾನ್ ಪಠಾಣ್ ಸೇರಿದಂತೆ ಹಲವು ಆಕಾಂಕ್ಷಿಗಳು ಭಾಗಿಯಾಗಿದ್ದರು.
PublicNext
22/10/2024 10:23 pm