ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಹನಸಿ ಗ್ರಾಮದ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಬೇಕು - ಮಾಜಿ ಸಚಿವ ಮುನೇನಕೊಪ್ಪ

ನವಲಗುಂದ: ನಿರಂತರ ಮಳೆಗೆ ಹನಸಿ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಓರ್ವ ಮಹಿಳೆ ಸಾವನಪ್ಪಿದ ಘಟನೆ ನಡೆದಿದೆ. ಸದ್ಯ ವಿಷಯ ತಿಳಿದು ಸ್ಥಳಕ್ಕೆ ಮಾಜಿ ಸಚಿವ ಮುನೇನಕೊಪ್ಪ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.. ಅಲ್ಲದೇ ಈ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿದ್ದಾರೆ.

ಇನ್ನು ಭೇಟಿ ನೀಡಿದ ವೇಳೆ ಕುಟುಂಬಸ್ಥರು ಗೋಳು ಕೇಳಿದ ಮಾಜಿ ಸಚಿವ ಮುನೇನಕೊಪ್ಪ ಅವರು, ಅವರಿಗೆ ಧೈರ್ಯ ಹೇಳಿದ್ದಾರೆ.. ಇನ್ನು ಮನೆಬಿದ್ದ ಪರಿಣಾಮ ಮೃತಪಟ್ಟ ಮಹಿಳೆ ದಿವಸದ ಕಾರ್ಯ ಮಾಡಲು ಕುಟುಂಬಸ್ಥರು ಜಾಗ ಇಲ್ಲದೇ ಗೋಳಾಡಿದ್ದಾರೆ.

ಇದೇ ವಿಚಾರಕ್ಕೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂತಹ ಸಂದರ್ಭದಲ್ಲಿ ಸರ್ಕಾರ ತುರ್ತು ಪರಿಹಾರ ನೀಡುವ ಕೆಲಸ ಮಾಡಿ, ಜನರ ಸಂಕಷ್ಟ ನಿವಾರಿಸಬೇಕು ಎಂದು ಹೇಳಿದ್ದಾರೆ. ಕೂಡಲೇ ಈ ಕುಟುಂಬಕ್ಕೆ 25ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

- ಶಂಕರ ಸುಭೇದಾರಮಠ, ಪಬ್ಲಿಕ್ ನೆಕ್ಸ್ಟ್ ನವಲಗುಂದ

Edited By : Manjunath H D
Kshetra Samachara

Kshetra Samachara

22/10/2024 10:55 pm

Cinque Terre

6.31 K

Cinque Terre

4

ಸಂಬಂಧಿತ ಸುದ್ದಿ