ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿದ್ದಾಪುರದಲ್ಲಿ ಕಾಣೆಯಾಗಿದ್ದ ತಮಿಳುನಾಡು ಮೂಲದ ವ್ಯಕ್ತಿ ಶವವಾಗಿ ಪತ್ತೆ

ಸಿದ್ದಾಪುರ : ಪಟ್ಟಣ ಪ್ರದೇಶದಲ್ಲಿ  ಹೂವಿನ ಗಿಡಗಳ  ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವ ಕಳೆದರಡು ದಿನಗಳ ಹಿಂದೆ ಕಾಣೆಯಾಗಿರುವ ಬಗ್ಗೆ ಪೊಲೀಸರು ಪ್ರಕಟಣೆ ನೀಡಿದ್ದರು ಶನಿವಾರ ಆತನ ಮೃತ ದೇಹ  ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸಿದ್ದಾಪುರದ ಜೋಗ ಮುಖ್ಯರಸ್ತೆಯ ಪಡವನ ಬೈಲ್ ಬಳಿಯ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ  ಕುಟುಂಬದವರು ಮಾಹಿತಿ ನೀಡಿದ್ದಾರೆ.

ತಮಿಳು ನಾಡಿನ ಮೂಲದ ವಿ. ರವಿ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

 ಬೈಕ್ ಸರ್ವಿಸ್ ಮಾಡಿಕೊಂಡು ಬರುತ್ತೇನೆ ಎಂದು ಹೇಳಿ ಹೋಗಿದ್ದ ವ್ಯಕ್ತಿ ನಾಪತ್ತೆಯಾಗಿದ್ದ ಶನಿವಾರ ಶವವಾಗಿ ಪತ್ತೆಯಾಗಿರುವುದಾಗಿ ಕುಟುಂಬಸ್ಥರಿಂದ ತಿಳಿದು ಬಂದಿದೆ.

ಘಟನೆ ಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪೊಲೀಸ್ ಮೂಲಗಳಿಂದ ತಿಳಿದು ಬರಬೇಕಿದೆ .

Edited By : PublicNext Desk
Kshetra Samachara

Kshetra Samachara

11/01/2025 03:25 pm

Cinque Terre

12 K

Cinque Terre

0