ಮೊಳಕಾಲ್ಮುರು : ಚಿಕ್ಕೋಬನಹಳ್ಳಿ, ಬಿಜಿಕೆರೆ,ಕೊಂಡ್ಲಹಳ್ಳಿ ಸೇರಿದಂತೆ ತಾಲೂಕಿನ ನಾನಾ ಗ್ರಾಮಗಳಲ್ಲಿ ಪೊಲೀಸ ಇಲಾಖೆಯಿಂದ ಹೆಲ್ಮೆಟ್ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು.
ಈ ವೇಳೆ ಪಿಎಸ್ ಐ ಪಾಂಡುರಂಗಪ್ಪ ಮಾತನಾಡಿ,ವಾಹನ ಸವಾರರು ರಸ್ತೆ ನಿಯಮ ಕಡ್ಡಾಯವಾಗಿ ಪಾಲನೆ ಮಾಡಬೇಕು. ನಿಮ್ಮ ಜೀವ ನೀವೇ ರಕ್ಷಣೆ ಮಾಡಿಕೊಳ್ಳಬೇಕು.ಈಗಾಗಲೇ ಹೆಲ್ಮೆಟ್ ಇಲ್ಲದೆಯೇ ಹಲವು ಸಾವು-ನೋವು ಸಂಭವಿಸಿವೆ. ಸೀಟ್ ಬೆಲ್ಟ್ ಧರಿಸದೇ ವಾಹನ ಚಲಾಯಿಸಿದ್ದಕ್ಕೆ ಹಲವು ಅಪಘಾತಗಳು ನಡೆದಿವೆ. ಈ ಬಗ್ಗೆ ಜಾಗೃತರಾಗಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಎಂದು ಹೇಳಿದ್ದರು .
Kshetra Samachara
20/01/2025 03:51 pm