ಶ್ರೀನಿವಾಸಪುರ: ಶ್ರೀನಿವಾಸಪುರ ಪೊಲೀಸರ ಜೂಜು ಅಡ್ಡೆ ಮೇಲೆ ದಾಳಿ ಮಾಡಿ 4 ಜನರನ್ನು ಬಂಧಿಸಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಬಾಗಲಹಳ್ಳಿ ಕೆರೆಯ ಅಂಗಳದಲ್ಲಿ 4 ಮಂದಿಯ ಗುಂಪೊಂದು ಇಸ್ಪೀಟು ಆಡುತ್ತಿದ್ದು ಖಚಿತ ಮಾಹಿತಿ ಮೇರೆಗೆ ಶ್ರೀನಿವಾಸಪುರ ಪೊಲೀಸ್ ಠಾಣೆಯ ಪಿಐ ಮೆಹಬೂಬ್ ಪಾಷ ನೇತೃತ್ವದ ಸಿಬ್ಬಂದಿ ತಂಡ ದಾಳಿ ನಡೆಸಿ 4 ಜನರ ಗುಂಪನ್ನು ಬಂಧಿಸಿ ಪಣಕ್ಕೆ ಇಟ್ಟಿದ್ದ 5000 ಸಾವಿರ ನಗದನ್ನು ವಶಪಡಿಸಿಕೊಂಡು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.
Kshetra Samachara
26/01/2025 04:59 pm