ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಹಾಸ್ಟೆಲ್ ಮತ್ತು ವಸತಿ ಶಾಲಾ ನೌಕರರ ಅಹೋರಾತ್ರಿ ಧರಣಿ

ವಿಜಯಪುರ: ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ನೌಕರರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗಿದೆ. ರಸ್ತೆ ಪಕ್ಕದಲ್ಲೇ ಟೆಂಟ್ ಹಾಕಿಕೊಂಡು ಮಹಿಳೆಯರು ಪ್ರತಿಭಟನೆ ನಡೆಸಿದ್ದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದಾರೆ.

ಜಿಲ್ಲೆಯಲ್ಲಿ 1500 ಜನ ಹೊರ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಇಲ್ಲ...ನೌಕರರ ಬಾಕಿ ವೇತನ‌ ಪಾವತಿ ಮಾಡಬೇಕು...ವಾರಕ್ಕೊಂದು ರಜೆ ಕೊಡಬೇಕು, ನಿವೃತ್ತಿವರೆಗೂ ಸೇವಾ ಭದ್ರತೆ ಕೊಡಬೇಕು....ಕನಿಷ್ಠ 31 ಸಾವಿರ ವೇತನ ನಿಗದಿ ಮಾಡಬೇಕು....ಹೀಗೆ ಹಲವು ಬೇಡಿಕೆಗಳೊಂದಿಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಿದ್ದಾರೆ.

Edited By : Ashok M
PublicNext

PublicNext

29/01/2025 03:12 pm

Cinque Terre

38.55 K

Cinque Terre

0