ಸಕಲೇಶಪುರ : ಗ್ರಾಮದ ಸಮೀಪವೇ ಕಾಡುಕೋಣ ಕಾಣಿಸಿಕೊಂಡಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಹೇರೂರು ಗ್ರಾಮದ ಬಳಿ ನಡೆದಿದೆ.ದೈತ್ಯಾಕಾರದ ಕಾಡುಕೋಣ ಕಂಡು ಸ್ಥಳೀಯರು ಆತಂಕಗೊಂಡಿದ್ದಾರೆ.ಕಾಡಿನಿಂದ ನಾಡಿಗೆ ಬಂದಿರುವ ಕಾಡುಕೋಣ
ರೈತರ ಜಮೀನಿನಲ್ಲಿ ಬೀಡುಬಿಟ್ಟಿದೆ. ಅರಣ್ಯ ಇಲಾಖೆಗೆ ಗ್ರಾಮಸ್ಥರು ಮಾಹಿತಿ ನೀಡಿದ ಹಿನ್ನೆಲೆ ಸ್ಥಳಕ್ಕೆ ಅರಣ್ಯ ಇಲಾಖೆಯ ಇ ಟಿ ಎಫ್ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
29/01/2025 03:44 pm