ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಜಿಂಕೆ ಮರಿಗೆ ಅಪರಿಚಿತ ವಾಹನ ಡಿಕ್ಕಿ, ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜಿಂಕೆ ಸಾವು!

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಉಳವಿ ಗ್ರಾಮದ ಬಳಿ ಅಪರಿಚಿತ ವಾಹನ ಒಂದು ಜಿಂಕೆ ಮರಿಗೆ ಡಿಕ್ಕಿ ಹೊಡೆದಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

ಸೊರಬ ತಾಲೂಕಿನ ಉಳವಿ ಗ್ರಾಮದಿಂದ ಶಿರಾಳಕೊಪ್ಪ ಹೋಗುವ ಮಾರ್ಗದಲ್ಲಿ ಇರುವ ದಟ್ಟ ಕಾಡಿನ ಸಮೀಪ ಜಿಂಕೆಮರಿ ಒಂದು ರಸ್ತೆಗೆ ಬಂದಿದ್ದು ಅದೇ ರಸ್ತೆಯಲ್ಲಿ ವೇಗವಾಗಿ ಹೋಗುತ್ತಿದ್ದ ಕಾರು ಒಂದು ಜಿಂಕೆ ಮರಿಗೆ ಡಿಕ್ಕಿ ಹೊಡೆದಿದ್ದು ಅಪಘಾತದಲ್ಲಿ ಜಿಂಕೆ ಮರಿಯ ಕಾಲಿಗೆ ತೀವ್ರವಾದ ಪೆಟ್ಟು ಬಿದ್ದಿತ್ತು.

ಸ್ಥಳೀಯರು ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ, ಮಾಹಿತಿ ನೀಡಿ‌ ಒಂದು ಗಂಟೆಯಾದರೂ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ. ಕೊನೆಗೆ ಜಿಂಕೆ ಮರಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಅರಣ್ಯ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಜಮೀಲ್ ಸಾಗರ್, ಪಬ್ಲಿಕ್ ನೆಕ್ಸ್ಟ್, ಸಾಗರ

Edited By : Vinayak Patil
PublicNext

PublicNext

01/02/2025 01:17 pm

Cinque Terre

9.02 K

Cinque Terre

0

ಸಂಬಂಧಿತ ಸುದ್ದಿ