ಮೈಸೂರು : ಮೈಸೂರಲ್ಲಿ ಇಂದು ಮಡಿವಾಳ ಮಾಚಿದೇವರ ಜಯಂತಿಯನ್ನ ಸಂಭ್ರಮದಿಂದ ನೆರವೇರಿಸಲಾಯಿತು. ಮಡಿವಾಳ ಮಾಚಿದೇವರ ಭಾವಚಿತ್ರವನ್ನ ಮೆರವಣಿಗೆಯ ವಾಹನದಲ್ಲಿಟ್ಟು ಪೂಜೆ ಸಲ್ಲಿಸಲಾಯಿತು.
ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಮುಂಭಾಗ ಮೆರವಣಿಗೆಗೆ ಚಾಲನೆ ನೀಡಿದ ಶಾಸಕ ಜಿಟಿ ದೇವೇಗೌಡಗೆ ಶಾಸಕ ಯತೀಂದ್ರ ಸಿದ್ದರಾಮಯ್ಯ ಸಾಥ್ ನೀಡಿದ್ರು. ಈ ವೇಳೆ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಯತೀಂದ್ರ ಸಿದ್ದರಾಮಯ್ಯ, ಜಿಟಿ ದೇವೇಗೌಡ ಚಾಲನೆ ನೀಡಿದ್ರು.
PublicNext
01/02/2025 05:01 pm